<p>ಹಾನಗಲ್: ‘ಹಾನಗಲ್ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂಬುದಾಗಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಒತ್ತಾಯಿಸಲಾಗಿದೆ’ ಎಂದು ಮಾಜಿ ಸಚಿವ ಮನೋಹರ ತಹಸೀಲ್ದಾರ್ ಹೇಳಿದರು.</p>.<p>ಕಳೆದ ಸಾರ್ವತ್ರಿಕ ಚುನವಣೆ ವೇಳೆ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿತ್ತು. ಇದು ಪುನರಾವರ್ತನೆ ಆಗಬಾರದು ಎಂಬ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ನಿಯೋಗದ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ<br /> ಹೇಳಿದರು.</p>.<p>‘ಕಳೆದ ಚುನಾವಣೆಯಲ್ಲಿ ಹೊರಗಿನ ಅಭ್ಯರ್ಥಿಗೆ ಮಣೆ ಹಾಕಿದ್ದರಿಂದ ನಮ್ಮ ವಿರೋಧಕ್ಕೆ ಅಂದು ಹೈಕಮಾಂಡ್ ಸ್ಪಷ್ಟನೆ ನೀಡಿತ್ತು. ಈ ಬಾರಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ, ಮುಂದಿನ ಬಾರಿ ಸ್ಥಳೀಯರಿಗೆ ಅವಕಾಶ ಮಾಡಿಕೊಡುತ್ತೇವೆ ಎಂಬ ಭರವಸೆ ಸಿಕ್ಕಿತ್ತು’ ಎಂದರು.</p>.<p>‘ಈಗ ವರಿಷ್ಠರನ್ನು ಭೇಟಿ ಮಾಡಿ ಅಂದು ನೀಡಿದ್ದ ಭರವಸೆಯನ್ನು ನೆನಪು ಮಾಡಿಕೊಡಲಾಗಿದೆ. ಸೂಕ್ತ ಎನ್ನಿಸುವ ಸ್ಥಳೀಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಒತ್ತಾಯಿಸಿದ್ದೇವೆ. ನಮ್ಮ ನಾಯಕರು ಸ್ಪಂದಿಸಿದ್ದಾರೆ. ಸದ್ಯ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಿದರು.</p>.<p>ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿ, ನಮ್ಮ ಕ್ಷೇತ್ರದವರಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂಬ ಒಂದು ಅಂಶದ ಒತ್ತಾಯವನ್ನು ವರಿಷ್ಠರ ಮುಂದಿಟ್ಟಿದ್ದೇವೆ. ಹೈಕಮಾಂಡ್ ಮೇಲೆ ಒತ್ತಡ ತರುವ ರೂಪರೇಷಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾನಗಲ್: ‘ಹಾನಗಲ್ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂಬುದಾಗಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಒತ್ತಾಯಿಸಲಾಗಿದೆ’ ಎಂದು ಮಾಜಿ ಸಚಿವ ಮನೋಹರ ತಹಸೀಲ್ದಾರ್ ಹೇಳಿದರು.</p>.<p>ಕಳೆದ ಸಾರ್ವತ್ರಿಕ ಚುನವಣೆ ವೇಳೆ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿತ್ತು. ಇದು ಪುನರಾವರ್ತನೆ ಆಗಬಾರದು ಎಂಬ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ನಿಯೋಗದ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ<br /> ಹೇಳಿದರು.</p>.<p>‘ಕಳೆದ ಚುನಾವಣೆಯಲ್ಲಿ ಹೊರಗಿನ ಅಭ್ಯರ್ಥಿಗೆ ಮಣೆ ಹಾಕಿದ್ದರಿಂದ ನಮ್ಮ ವಿರೋಧಕ್ಕೆ ಅಂದು ಹೈಕಮಾಂಡ್ ಸ್ಪಷ್ಟನೆ ನೀಡಿತ್ತು. ಈ ಬಾರಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ, ಮುಂದಿನ ಬಾರಿ ಸ್ಥಳೀಯರಿಗೆ ಅವಕಾಶ ಮಾಡಿಕೊಡುತ್ತೇವೆ ಎಂಬ ಭರವಸೆ ಸಿಕ್ಕಿತ್ತು’ ಎಂದರು.</p>.<p>‘ಈಗ ವರಿಷ್ಠರನ್ನು ಭೇಟಿ ಮಾಡಿ ಅಂದು ನೀಡಿದ್ದ ಭರವಸೆಯನ್ನು ನೆನಪು ಮಾಡಿಕೊಡಲಾಗಿದೆ. ಸೂಕ್ತ ಎನ್ನಿಸುವ ಸ್ಥಳೀಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಒತ್ತಾಯಿಸಿದ್ದೇವೆ. ನಮ್ಮ ನಾಯಕರು ಸ್ಪಂದಿಸಿದ್ದಾರೆ. ಸದ್ಯ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಿದರು.</p>.<p>ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿ, ನಮ್ಮ ಕ್ಷೇತ್ರದವರಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂಬ ಒಂದು ಅಂಶದ ಒತ್ತಾಯವನ್ನು ವರಿಷ್ಠರ ಮುಂದಿಟ್ಟಿದ್ದೇವೆ. ಹೈಕಮಾಂಡ್ ಮೇಲೆ ಒತ್ತಡ ತರುವ ರೂಪರೇಷಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>