<p><strong>ಹಾವೇರಿ</strong>: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಕೃಷ್ಣ ಬಿ. ಗುಡಗೇರಿ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶನಿವಾರ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.</p><p>ಹುಬ್ಬಳ್ಳಿಯ ನವನಗರದ ರಾಮಕೃಷ್ಣ ಅವರು 2010ರಲ್ಲಿ ಪಿಡಿಒ ಆಗಿ ನೇಮಕಗೊಂಡಿದ್ದರು. ಹಲವು ಪಂಚಾಯಿತಿಗಳಲ್ಲಿ ಕೆಲಸ ಮಾಡಿ, ಕೆಲ ವರ್ಷಗಳಿಂದ ಬಾಡ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿದ್ದರು.</p><p>ಅಕ್ರಮ ಆಸ್ತಿ ಗಳಿಕೆ ಮಾಡಿರುವ ಆರೋಪ ಬರುತ್ತಿದ್ದಂತೆ ಲೋಕಾಯುಕ್ತ ಪೊಲೀಸರು, ಶನಿವಾರ ನಸುಕಿನಲ್ಲಿ ಬಾಡ ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಹುಬ್ಬಳ್ಳಿಯ ನವನಗರದಲ್ಲಿರುವ ರಾಮಕೃಷ್ಣ ಅವರ ಮನೆ ಮೇಲೆ ದಾಳಿ ಮಾಡಿದ್ದರು.</p><p>ದಾಳಿ ಸಂದರ್ಭದಲ್ಲಿ ನಗದು, ಚಿನ್ನಾಭರಣ, ಚರಾಸ್ತಿಗೆ ಸಂಬಂಧಪಟ್ಟ ದಾಖಲೆಗಳು ಪತ್ತೆಯಾಗಿವೆ. ಪಿಡಿಒ ರಾಮಕೃಷ್ಣ, ತಮ್ಮ ಆದಾಯಕ್ಕಿಂತ ಶೇ 138ರಷ್ಟು ಅಕ್ರಮ ಆಸ್ತಿ ಹೊಂದಿರುವುದು ಲೋಕಾಯುಕ್ತ ಪೊಲೀಸರ ಪರಿಶೀಲನೆಯಿಂದ ಗೊತ್ತಾಗಿದೆ </p><p>‘ರಾಮಕೃಷ್ಣ ಅವರ ಬಳಿ ₹ 79,500 ನಗದು, ₹ 8.53 ಲಕ್ಷ ಮೌಲ್ಯದ ಚಿನ್ನಾಭರಣ ಸಿಕ್ಕಿದೆ. ಜೊತೆಗೆ, ಹುಬ್ಬಳ್ಳಿ–ಧಾರವಾಡದಲ್ಲಿ ಎರಡು ನಿವೇಶನ ಸೇರಿದಂತೆ ₹ 86.15 ಲಕ್ಷ ಮೌಲ್ಯದ ಸ್ಥಿರಾಸ್ತಿಯೂ ಪತ್ತೆಯಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.ಲೋಕಾ ದಾಳಿ: PWD ಉತ್ತರ ವಲಯ ಮುಖ್ಯ ಎಂಜಿನಿಯರ್ ಸುರೇಶ್ ಬಳಿ ಅಪಾರ ಆಸ್ತಿ ಪತ್ತೆ.ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ವಾಪಸ್!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಕೃಷ್ಣ ಬಿ. ಗುಡಗೇರಿ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶನಿವಾರ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.</p><p>ಹುಬ್ಬಳ್ಳಿಯ ನವನಗರದ ರಾಮಕೃಷ್ಣ ಅವರು 2010ರಲ್ಲಿ ಪಿಡಿಒ ಆಗಿ ನೇಮಕಗೊಂಡಿದ್ದರು. ಹಲವು ಪಂಚಾಯಿತಿಗಳಲ್ಲಿ ಕೆಲಸ ಮಾಡಿ, ಕೆಲ ವರ್ಷಗಳಿಂದ ಬಾಡ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿದ್ದರು.</p><p>ಅಕ್ರಮ ಆಸ್ತಿ ಗಳಿಕೆ ಮಾಡಿರುವ ಆರೋಪ ಬರುತ್ತಿದ್ದಂತೆ ಲೋಕಾಯುಕ್ತ ಪೊಲೀಸರು, ಶನಿವಾರ ನಸುಕಿನಲ್ಲಿ ಬಾಡ ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಹುಬ್ಬಳ್ಳಿಯ ನವನಗರದಲ್ಲಿರುವ ರಾಮಕೃಷ್ಣ ಅವರ ಮನೆ ಮೇಲೆ ದಾಳಿ ಮಾಡಿದ್ದರು.</p><p>ದಾಳಿ ಸಂದರ್ಭದಲ್ಲಿ ನಗದು, ಚಿನ್ನಾಭರಣ, ಚರಾಸ್ತಿಗೆ ಸಂಬಂಧಪಟ್ಟ ದಾಖಲೆಗಳು ಪತ್ತೆಯಾಗಿವೆ. ಪಿಡಿಒ ರಾಮಕೃಷ್ಣ, ತಮ್ಮ ಆದಾಯಕ್ಕಿಂತ ಶೇ 138ರಷ್ಟು ಅಕ್ರಮ ಆಸ್ತಿ ಹೊಂದಿರುವುದು ಲೋಕಾಯುಕ್ತ ಪೊಲೀಸರ ಪರಿಶೀಲನೆಯಿಂದ ಗೊತ್ತಾಗಿದೆ </p><p>‘ರಾಮಕೃಷ್ಣ ಅವರ ಬಳಿ ₹ 79,500 ನಗದು, ₹ 8.53 ಲಕ್ಷ ಮೌಲ್ಯದ ಚಿನ್ನಾಭರಣ ಸಿಕ್ಕಿದೆ. ಜೊತೆಗೆ, ಹುಬ್ಬಳ್ಳಿ–ಧಾರವಾಡದಲ್ಲಿ ಎರಡು ನಿವೇಶನ ಸೇರಿದಂತೆ ₹ 86.15 ಲಕ್ಷ ಮೌಲ್ಯದ ಸ್ಥಿರಾಸ್ತಿಯೂ ಪತ್ತೆಯಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.ಲೋಕಾ ದಾಳಿ: PWD ಉತ್ತರ ವಲಯ ಮುಖ್ಯ ಎಂಜಿನಿಯರ್ ಸುರೇಶ್ ಬಳಿ ಅಪಾರ ಆಸ್ತಿ ಪತ್ತೆ.ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ವಾಪಸ್!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>