<p><strong>ಹಾವೇರಿ:</strong> ವಂಶವೃಕ್ಷ ನೀಡಲು ಲಂಚ ಪಡೆದ ಆರೋಪದಡಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿಯ ಉಪ ತಹಶೀಲ್ದಾರ್ ನಾಗರಾಜ ಸೂರ್ಯವಂಶಿ ಹಾಗೂ ಕಂಪ್ಯೂಟರ್ ಆಪರೇಟರ್ ಕಿರಣ ಮುದಕಣ್ಣನವರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ಹಾನಗಲ್ ತಾಲ್ಲೂಕಿನ ಯಳವಟ್ಟಿ ಗ್ರಾಮದ ಗಂಗಾಧರ ರಾಮಪ್ಪ ಕ್ಯಾತನಕೇರಿ ಎಂಬುವವರು ಲಂಚದ ಬಗ್ಗೆ ಲೋಕಾಯುಕ್ತ ಜಿಲ್ಲಾ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ದಾಖಲಿಸಿಕೊಂಡಿದ್ದ ಪೊಲೀಸರು, ಕಾರ್ಯಾಚರಣೆ ನಡೆಸಿ ಲಂಚದ ಹಣದ ಸಮೇತ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.</p><p>‘ದೂರುದಾರ ಗಂಗಾಧರ ಅವರ ಸಂಬಂಧಿ ದಯಾನಂದ ರುದ್ರಪ್ಪ ಯಲಿಗಾರ ಅವರು ತಮ್ಮ ವಂಶವೃಕ್ಷ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಉಪ ತಹಶೀಲ್ದಾರ್ ನಾಗರಾಜ ಹಾಗೂ ಕಂಪ್ಯೂಟರ್ ಆಪರೇಟರ್ (ಗುತ್ತಿಗೆ ಕೆಲಸ) ಕಿರಣ ಮುದಕಣ್ಣನವರ, ವಂಶವೃಕ್ಷ ನೀಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದರು.’</p><p>‘ಇಬ್ಬರೂ ಆರೋಪಿಗಳು, ನಾಡಕಚೇರಿಯಲ್ಲಿಯೇ ದೂರುದಾರರಿಂದ ಗುರುವಾರ ₹2,000 ಲಂಚ ಪಡೆದಿದ್ದರು. ಇದೇ ಸಂದರ್ಭದಲ್ಲಿ ದಾಳಿ ಮಾಡಿ, ಹಣದ ಸಮೇತ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಇಬ್ಬರನ್ನೂ ಬಂಧಿಸಿ ತನಿಖೆ ಮುಂದುವರಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ಮಧುಸೂದನ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ವಂಶವೃಕ್ಷ ನೀಡಲು ಲಂಚ ಪಡೆದ ಆರೋಪದಡಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿಯ ಉಪ ತಹಶೀಲ್ದಾರ್ ನಾಗರಾಜ ಸೂರ್ಯವಂಶಿ ಹಾಗೂ ಕಂಪ್ಯೂಟರ್ ಆಪರೇಟರ್ ಕಿರಣ ಮುದಕಣ್ಣನವರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ಹಾನಗಲ್ ತಾಲ್ಲೂಕಿನ ಯಳವಟ್ಟಿ ಗ್ರಾಮದ ಗಂಗಾಧರ ರಾಮಪ್ಪ ಕ್ಯಾತನಕೇರಿ ಎಂಬುವವರು ಲಂಚದ ಬಗ್ಗೆ ಲೋಕಾಯುಕ್ತ ಜಿಲ್ಲಾ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ದಾಖಲಿಸಿಕೊಂಡಿದ್ದ ಪೊಲೀಸರು, ಕಾರ್ಯಾಚರಣೆ ನಡೆಸಿ ಲಂಚದ ಹಣದ ಸಮೇತ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.</p><p>‘ದೂರುದಾರ ಗಂಗಾಧರ ಅವರ ಸಂಬಂಧಿ ದಯಾನಂದ ರುದ್ರಪ್ಪ ಯಲಿಗಾರ ಅವರು ತಮ್ಮ ವಂಶವೃಕ್ಷ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಉಪ ತಹಶೀಲ್ದಾರ್ ನಾಗರಾಜ ಹಾಗೂ ಕಂಪ್ಯೂಟರ್ ಆಪರೇಟರ್ (ಗುತ್ತಿಗೆ ಕೆಲಸ) ಕಿರಣ ಮುದಕಣ್ಣನವರ, ವಂಶವೃಕ್ಷ ನೀಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದರು.’</p><p>‘ಇಬ್ಬರೂ ಆರೋಪಿಗಳು, ನಾಡಕಚೇರಿಯಲ್ಲಿಯೇ ದೂರುದಾರರಿಂದ ಗುರುವಾರ ₹2,000 ಲಂಚ ಪಡೆದಿದ್ದರು. ಇದೇ ಸಂದರ್ಭದಲ್ಲಿ ದಾಳಿ ಮಾಡಿ, ಹಣದ ಸಮೇತ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಇಬ್ಬರನ್ನೂ ಬಂಧಿಸಿ ತನಿಖೆ ಮುಂದುವರಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ಮಧುಸೂದನ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>