<p><strong>ಹಾನಗಲ್:</strong> ತಾಲ್ಲೂಕಿನ ಹಿರೂರ ಕ್ರಾಸ್ ಸಮೀಪ ಹಾವೇರಿ–ಶಿರಸಿ ರಸ್ತೆಯಲ್ಲಿ ಗುರುವಾರ ತಡರಾತ್ರಿ ತಂಪು ಪಾನೀಯ ತುಂಬಿಕೊಂಡು ಹೊರಟಿದ್ದ ಲಾರಿ ಮಗುಚಿ ಬಿದ್ದಿದ್ದು, ಬೆಳಗಾಗುವಷ್ಟರಲ್ಲಿ ಲಾರಿಯಲ್ಲಿದ್ದ ಅರ್ಧಕ್ಕಿಂತ ಹೆಚ್ಚು ತಂಪು ಪಾನೀಯ ಬಾಟಲ್ಗಳು ದಾರಿಹೋಕರ ಪಾಲಾಗಿವೆ.</p>.<p>ಬೆಂಗಳೂರಿನ ಬಿಡದಿಯಿಂದ ಶಿರಸಿಗೆ ಪಾನೀಯ ಸಾಗಿಸುತ್ತಿದ್ದ ಲಾರಿಯಲ್ಲಿ ವಿವಿಧ ಕಂಪನಿಯ ತಂಪು ಪಾನೀಯ ಬಾಟಲ್, ಟೆಟ್ರಾಪ್ಯಾಕೆಟ್ ಇದ್ದವು. ರಾತ್ರಿ ಸುರಿದ ಮಳೆಯಿಂದ ರಸ್ತೆಯ ಬದಿಯಲ್ಲಿ ತೇವ ಆವರಿಸಿದ್ದ ಕಾರಣಕ್ಕಾಗಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲಾರಿ ಚಾಲಕ ಅವಿನಾಶ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹಾನಗಲ್ಗೆ ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದಾರೆ. ಈ ನಡುವೆ, ರಸ್ತೆ ಬದಿಯಲ್ಲಿ ಬಿದ್ದಿದ್ದ ಲಾರಿಯಲ್ಲಿ ಪಾನೀಯ ನೋಡಿದ ಜನರು ಬಾಟಲಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಕೆಲವರು ತಮ್ಮ ವಾಹನದಲ್ಲಿ ಬಾಟಲಿಗಳನ್ನು ತುಂಬಿಕೊಂಡು ಹೋದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಶುಕ್ರವಾರ ಬೆಳಿಗ್ಗೆ ಸ್ಥಳಕ್ಕೆ ಬಂದ ಪೊಲೀಸರು ಲಾರಿ ಮತ್ತು ಉಳಿದ ಪಾನೀಯ ಬಾಟಲ್ಗಳ ರಕ್ಷಣೆಗೆ ಮುಂದಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್:</strong> ತಾಲ್ಲೂಕಿನ ಹಿರೂರ ಕ್ರಾಸ್ ಸಮೀಪ ಹಾವೇರಿ–ಶಿರಸಿ ರಸ್ತೆಯಲ್ಲಿ ಗುರುವಾರ ತಡರಾತ್ರಿ ತಂಪು ಪಾನೀಯ ತುಂಬಿಕೊಂಡು ಹೊರಟಿದ್ದ ಲಾರಿ ಮಗುಚಿ ಬಿದ್ದಿದ್ದು, ಬೆಳಗಾಗುವಷ್ಟರಲ್ಲಿ ಲಾರಿಯಲ್ಲಿದ್ದ ಅರ್ಧಕ್ಕಿಂತ ಹೆಚ್ಚು ತಂಪು ಪಾನೀಯ ಬಾಟಲ್ಗಳು ದಾರಿಹೋಕರ ಪಾಲಾಗಿವೆ.</p>.<p>ಬೆಂಗಳೂರಿನ ಬಿಡದಿಯಿಂದ ಶಿರಸಿಗೆ ಪಾನೀಯ ಸಾಗಿಸುತ್ತಿದ್ದ ಲಾರಿಯಲ್ಲಿ ವಿವಿಧ ಕಂಪನಿಯ ತಂಪು ಪಾನೀಯ ಬಾಟಲ್, ಟೆಟ್ರಾಪ್ಯಾಕೆಟ್ ಇದ್ದವು. ರಾತ್ರಿ ಸುರಿದ ಮಳೆಯಿಂದ ರಸ್ತೆಯ ಬದಿಯಲ್ಲಿ ತೇವ ಆವರಿಸಿದ್ದ ಕಾರಣಕ್ಕಾಗಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲಾರಿ ಚಾಲಕ ಅವಿನಾಶ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹಾನಗಲ್ಗೆ ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದಾರೆ. ಈ ನಡುವೆ, ರಸ್ತೆ ಬದಿಯಲ್ಲಿ ಬಿದ್ದಿದ್ದ ಲಾರಿಯಲ್ಲಿ ಪಾನೀಯ ನೋಡಿದ ಜನರು ಬಾಟಲಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಕೆಲವರು ತಮ್ಮ ವಾಹನದಲ್ಲಿ ಬಾಟಲಿಗಳನ್ನು ತುಂಬಿಕೊಂಡು ಹೋದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಶುಕ್ರವಾರ ಬೆಳಿಗ್ಗೆ ಸ್ಥಳಕ್ಕೆ ಬಂದ ಪೊಲೀಸರು ಲಾರಿ ಮತ್ತು ಉಳಿದ ಪಾನೀಯ ಬಾಟಲ್ಗಳ ರಕ್ಷಣೆಗೆ ಮುಂದಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>