<p><strong>ಹಾವೇರಿ</strong>: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿರುವ ಅಪಘಾತದಲ್ಲಿ ಮೃತಪಟ್ಟಿರುವ 10 ಮಂದಿಯು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ನಿವಾಸಿಗಳು. ಇವರ ಸಾವಿನಿಂದ ಸವಣೂರಿನ ಪ್ರತಿ ಓಣಿಯಲ್ಲೂ ದುಃಖ ಮಡುಗಟ್ಟಿದೆ.</p><p>ಪಟ್ಟಣದ ಹಲವೆಡೆ ಪ್ರತ್ಯೇಕವಾಗಿ ವಾಸವಿದ್ದ ಮೃತರು, ತರಕಾರಿ ಹಾಗೂ ಹಣ್ಣು ವ್ಯಾಪಾರಕ್ಕೆಂದು ಕುಮಟಾ ಸಂತೆಗೆ ಹೊರಟಿದ್ದರು. ಇವರ ಸಾವಿನಿಂದ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.</p><p>ಸಂಬಂಧಿಕರು ಮನೆಗೆ ಬಂದು ಕುಟುಂಬಸ್ಥರನ್ನು ಸಮಾಧಾನ ಮಾಡುತ್ತಿದ್ದಾರೆ. ಆದರೆ, ದಾರುಣ ಘಟನೆಯಿಂದ 10 ಜನ ಒಂದೇ ದಿನ ಮೃತಪಟ್ಟಿದ್ದರಿಂದ ಇಡೀ ಪಟ್ಟಣವೇ ದುಃಖದಲ್ಲಿದೆ.</p><p>ಓಣಿಯ ಮುಖಂಡರೇ ಮುಂದೆ ನಿಂತು ವಿಧಿವಿಧಾನ ಪೂರೈಸಲು ಸಿದ್ದತೆ ಮಾಡುತ್ತಿದ್ದಾರೆ. ಇಂಥ ಘಟನೆ ಜೀವನದಲ್ಲಿ ಎಂದಿಗೂ ನೋಡಿರಲಿಲ್ಲವೆಂದು ಜನರು ಹೇಳುತ್ತಿದ್ದಾರೆ.</p><p>ಯಲ್ಲಾಪುರ ಆಸ್ಪತ್ರೆ ಹಾಗೂ ಹುಬ್ಬಳ್ಳಿ ಕಿಮ್ಸ್ನಲ್ಲಿ ಮೃತದೇಹಗಳು ಇವೆ. ಅವುಗಳನ್ನು ಸವಣೂರಿಗೆ ತರುವ ಕೆಲಸ ನಡೆಯುತ್ತಿದೆ. ಮೃತರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ.</p><p>ಹಾವೇರಿ ಪೊಲೀಸ್ ಹೆಚ್ಚುವರಿ ಎಸ್ಪಿ ಲಕ್ಷ್ಮಣ ಶಿರಕೋಳ, ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಶಿಗ್ಗಾವಿ ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ ಅವರು ಯಲ್ಲಾಪುರ ಆಸ್ಪತ್ರೆಯಲ್ಲಿಯೇ ಬೀಡು ಬಿಟ್ಟಿದ್ದಾರೆ.</p>.ಯಲ್ಲಾಪುರ ಬಳಿ ಅರೆಬೈಲ್ ಘಾಟ್ನಲ್ಲಿ ಹಣ್ಣು ತುಂಬಿದ್ದ ಲಾರಿ ಪಲ್ಟಿ: 10 ಜನರ ಸಾವು.ಅರಬೈಲ್ ಬಳಿ ಲಾರಿ ಪಲ್ಟಿ: ಸವಣೂರಿನ 10 ಜನರಿಗೆ ಹುಬ್ಬಳ್ಳಿ KIMSನಲ್ಲಿ ಚಿಕಿತ್ಸೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿರುವ ಅಪಘಾತದಲ್ಲಿ ಮೃತಪಟ್ಟಿರುವ 10 ಮಂದಿಯು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ನಿವಾಸಿಗಳು. ಇವರ ಸಾವಿನಿಂದ ಸವಣೂರಿನ ಪ್ರತಿ ಓಣಿಯಲ್ಲೂ ದುಃಖ ಮಡುಗಟ್ಟಿದೆ.</p><p>ಪಟ್ಟಣದ ಹಲವೆಡೆ ಪ್ರತ್ಯೇಕವಾಗಿ ವಾಸವಿದ್ದ ಮೃತರು, ತರಕಾರಿ ಹಾಗೂ ಹಣ್ಣು ವ್ಯಾಪಾರಕ್ಕೆಂದು ಕುಮಟಾ ಸಂತೆಗೆ ಹೊರಟಿದ್ದರು. ಇವರ ಸಾವಿನಿಂದ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.</p><p>ಸಂಬಂಧಿಕರು ಮನೆಗೆ ಬಂದು ಕುಟುಂಬಸ್ಥರನ್ನು ಸಮಾಧಾನ ಮಾಡುತ್ತಿದ್ದಾರೆ. ಆದರೆ, ದಾರುಣ ಘಟನೆಯಿಂದ 10 ಜನ ಒಂದೇ ದಿನ ಮೃತಪಟ್ಟಿದ್ದರಿಂದ ಇಡೀ ಪಟ್ಟಣವೇ ದುಃಖದಲ್ಲಿದೆ.</p><p>ಓಣಿಯ ಮುಖಂಡರೇ ಮುಂದೆ ನಿಂತು ವಿಧಿವಿಧಾನ ಪೂರೈಸಲು ಸಿದ್ದತೆ ಮಾಡುತ್ತಿದ್ದಾರೆ. ಇಂಥ ಘಟನೆ ಜೀವನದಲ್ಲಿ ಎಂದಿಗೂ ನೋಡಿರಲಿಲ್ಲವೆಂದು ಜನರು ಹೇಳುತ್ತಿದ್ದಾರೆ.</p><p>ಯಲ್ಲಾಪುರ ಆಸ್ಪತ್ರೆ ಹಾಗೂ ಹುಬ್ಬಳ್ಳಿ ಕಿಮ್ಸ್ನಲ್ಲಿ ಮೃತದೇಹಗಳು ಇವೆ. ಅವುಗಳನ್ನು ಸವಣೂರಿಗೆ ತರುವ ಕೆಲಸ ನಡೆಯುತ್ತಿದೆ. ಮೃತರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ.</p><p>ಹಾವೇರಿ ಪೊಲೀಸ್ ಹೆಚ್ಚುವರಿ ಎಸ್ಪಿ ಲಕ್ಷ್ಮಣ ಶಿರಕೋಳ, ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಶಿಗ್ಗಾವಿ ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ ಅವರು ಯಲ್ಲಾಪುರ ಆಸ್ಪತ್ರೆಯಲ್ಲಿಯೇ ಬೀಡು ಬಿಟ್ಟಿದ್ದಾರೆ.</p>.ಯಲ್ಲಾಪುರ ಬಳಿ ಅರೆಬೈಲ್ ಘಾಟ್ನಲ್ಲಿ ಹಣ್ಣು ತುಂಬಿದ್ದ ಲಾರಿ ಪಲ್ಟಿ: 10 ಜನರ ಸಾವು.ಅರಬೈಲ್ ಬಳಿ ಲಾರಿ ಪಲ್ಟಿ: ಸವಣೂರಿನ 10 ಜನರಿಗೆ ಹುಬ್ಬಳ್ಳಿ KIMSನಲ್ಲಿ ಚಿಕಿತ್ಸೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>