ಸಚಿವ ಎಸ್.ಅಂಗಾರ ಮಾತನಾಡಿ, ಬಿಜೆಪಿಗೆ ನೀತಿ, ಸಿದ್ಧಾಂತ ಇದೆ. ಜನಕಲ್ಯಾಣದ ಕಾರ್ಯಕ್ರಮಗಳಿವೆ. ಕೊರೊನಾವನ್ನು ಸಮರ್ಥವಾಗಿ ತಡೆಗಟ್ಟಿದ ಜಗತ್ತಿನ ಕೆಲವೇ ಕೆಲವು ದೇಶಗಳಲ್ಲಿ ಭಾರತವೂ ಒಂದು ಎನ್ನುವ ಹೆಮ್ಮೆ, ಅಭಿಮಾನ ಎಲ್ಲರಲ್ಲಿಯೂ ಮೂಡಿದೆ. ದೇಶದ ನಾಯಕತ್ವ ಸಮರ್ಥ ನೇತಾರನ ಕೈಯಲ್ಲಿದೆ ಎನ್ನುವ ವಿಶ್ವಾಸ ಜನಸಾಮಾನ್ಯರಲ್ಲಿದೆ. ದಿ.ಸಿ.ಎಂ.ಉದಾಸಿ ಅವರ ಅಭಿವೃದ್ಧಿ ಕಾರ್ಯಗಳು ಮಾತನಾಡುತ್ತಿವೆ. ಹೀಗಾಗಿ ಸಜ್ಜನರ ಅಧಿಕ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.