<p><strong>ರಾಣೆಬೆನ್ನೂರು</strong>: ನಗರದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಪಿಕೆಕೆ ಇನಿಷಿಯೇಟಿವ್ಸ್ ಹಾಗೂ ಕಾಂಗ್ರೆಸ್ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಅಭಿಮಾನಿ ಬಳಗದಿಂದ ಮಕ್ಕಳಿಗೆ ಹಾಗೂ ತಾಯಿ ಮತ್ತು ಮಗುವಿಗೆ ಪ್ರತ್ಯೇಕವಾಗಿ ಪೌರಾಣಿಕ ವೇಷಭೂಷಣ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಇಲ್ಲಿನ ಅಶೋಕ ವೃತ್ತದ ಬಳಿ ಮಾ. 8 ರಂದು ಸಂಜೆ 6 ರಿಂದ ರಾತ್ರಿ 12 ಗಂಟೆಯವರೆಗೆ ಏರ್ಪಡಿಸಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಯಿ ಮತ್ತು ಮಗು ಹಾಗೂ 8 ರಿಂದ 14 ವರ್ಷದೊಳಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಬಹುದಾಗಿದೆ ಎಂದರು. </p>.<p>ತಾಯಿ ಮ್ತು ಮಗು ಸ್ಪರ್ಧೆಗೆ ಮೊದಲ ಬಹುಮಾನ ₹15 ಸಾವಿರ, ದ್ವಿತೀಯ ಬಹುಮಾನ ₹10 ಸಾವಿರ ಹಾಗೂ ತೃತೀಯ ಬಹುಮಾನ ₹7.5 ಸಾವಿರ ನೀಡಲಾಗುವುದು.</p>.<p>8 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಪ್ರಥಮ ಬಹುಮಾನ ₹10 ಸಾವಿರ, ದ್ವಿತೀಯ ಬಹುಮಾನ ₹7500 ಹಾಗೂ ತೃತೀಯ ಬಹುಮಾನ ₹5 ಸಾವಿರ ಬಹುಮಾನ ನೀಡಲಾಗುವುದು ಎಂದರು. </p>.<p>ಸರಿಗಮಪ ಖ್ಯಾತಿಯ ಹನುಮಂತ, ಖಾಸಿಂಸಾಬ್, ಮೊಬೀನಾ ಸೇರಿದಂತೆ ಹಾಸ್ಯ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಭಕ್ತಿಗೀತೆ, ಜಾನಪದ, ಶಿವ ತಾಂಡವ ನೃತ್ಯ, ಭರತನಾಟ್ಯ, ಹಾಸ್ಯ ಸಂವಾದ ಕಾರ್ಯಕ್ರಮಗಳು ನಡೆಯುತ್ತವೆ. ವಿಜೇತರಾದವರಿಗೆ ನಗದು ಬಹುಮಾನ ವಿತರಿಸಲಾಗುವುದು ಎಂದರು. </p>.<p>ಆಸಕ್ತರು ಮೊ.ನಂ; 7676185824 ಹಾಗೂ 9164803582ಗೆ ಸಂಪರ್ಕಿಸಬಹುದು. ಹೆಸರು ನೋಂದಾಯಿಸಲು ಮಾ.7 ಕೊನೆಯ ದಿನವಾಗಿದೆ ಎಂದು ತಿಳಿಸಿದರು.</p>.<p>ಮಂಜನಗೌಡ ಪಾಟೀಲ, ಯಲ್ಲಪ್ಪ ರಡ್ಡೇರ, ಇರ್ಫಾನ ದಿಡಗೂರ, ಗಂಗಾಧರ ಬಣಕಾರ, ಹನುಮಂತಪ್ಪ ಬ್ಯಾಲದಹಳ್ಳಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ನಗರದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಪಿಕೆಕೆ ಇನಿಷಿಯೇಟಿವ್ಸ್ ಹಾಗೂ ಕಾಂಗ್ರೆಸ್ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಅಭಿಮಾನಿ ಬಳಗದಿಂದ ಮಕ್ಕಳಿಗೆ ಹಾಗೂ ತಾಯಿ ಮತ್ತು ಮಗುವಿಗೆ ಪ್ರತ್ಯೇಕವಾಗಿ ಪೌರಾಣಿಕ ವೇಷಭೂಷಣ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಇಲ್ಲಿನ ಅಶೋಕ ವೃತ್ತದ ಬಳಿ ಮಾ. 8 ರಂದು ಸಂಜೆ 6 ರಿಂದ ರಾತ್ರಿ 12 ಗಂಟೆಯವರೆಗೆ ಏರ್ಪಡಿಸಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಯಿ ಮತ್ತು ಮಗು ಹಾಗೂ 8 ರಿಂದ 14 ವರ್ಷದೊಳಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಬಹುದಾಗಿದೆ ಎಂದರು. </p>.<p>ತಾಯಿ ಮ್ತು ಮಗು ಸ್ಪರ್ಧೆಗೆ ಮೊದಲ ಬಹುಮಾನ ₹15 ಸಾವಿರ, ದ್ವಿತೀಯ ಬಹುಮಾನ ₹10 ಸಾವಿರ ಹಾಗೂ ತೃತೀಯ ಬಹುಮಾನ ₹7.5 ಸಾವಿರ ನೀಡಲಾಗುವುದು.</p>.<p>8 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಪ್ರಥಮ ಬಹುಮಾನ ₹10 ಸಾವಿರ, ದ್ವಿತೀಯ ಬಹುಮಾನ ₹7500 ಹಾಗೂ ತೃತೀಯ ಬಹುಮಾನ ₹5 ಸಾವಿರ ಬಹುಮಾನ ನೀಡಲಾಗುವುದು ಎಂದರು. </p>.<p>ಸರಿಗಮಪ ಖ್ಯಾತಿಯ ಹನುಮಂತ, ಖಾಸಿಂಸಾಬ್, ಮೊಬೀನಾ ಸೇರಿದಂತೆ ಹಾಸ್ಯ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಭಕ್ತಿಗೀತೆ, ಜಾನಪದ, ಶಿವ ತಾಂಡವ ನೃತ್ಯ, ಭರತನಾಟ್ಯ, ಹಾಸ್ಯ ಸಂವಾದ ಕಾರ್ಯಕ್ರಮಗಳು ನಡೆಯುತ್ತವೆ. ವಿಜೇತರಾದವರಿಗೆ ನಗದು ಬಹುಮಾನ ವಿತರಿಸಲಾಗುವುದು ಎಂದರು. </p>.<p>ಆಸಕ್ತರು ಮೊ.ನಂ; 7676185824 ಹಾಗೂ 9164803582ಗೆ ಸಂಪರ್ಕಿಸಬಹುದು. ಹೆಸರು ನೋಂದಾಯಿಸಲು ಮಾ.7 ಕೊನೆಯ ದಿನವಾಗಿದೆ ಎಂದು ತಿಳಿಸಿದರು.</p>.<p>ಮಂಜನಗೌಡ ಪಾಟೀಲ, ಯಲ್ಲಪ್ಪ ರಡ್ಡೇರ, ಇರ್ಫಾನ ದಿಡಗೂರ, ಗಂಗಾಧರ ಬಣಕಾರ, ಹನುಮಂತಪ್ಪ ಬ್ಯಾಲದಹಳ್ಳಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>