<p><strong>ಹಾನಗಲ್</strong>: ಗೋವಿನಜೋಳ ಬೆಳೆಗೆ ಬೆಲೆ ನಿಗದಿ ಮತ್ತು ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಬುಧವಾರ ರೈತ ಸಂಘದಿಂದ ತಹಶೀಲ್ದಾರ್ ರೇಣುಕಾ.ಎಸ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಸತತ ಮಳೆಯಿಂದ ಬೆಳೆಗಳು ಹಾನಿಯಾಗಿ ರೈತರ ಕೈಗೆ ಸಿಗದಂತಾಗಿವೆ. ಸಾಲ ಮಾಡಿ ರೈತರು ಕಂಗಾಲಾಗಿದ್ದಾರೆ. ಅಲ್ಪಸ್ವಲ್ಪ ಬೆಳೆದ ಗೋವಿಜೋಳ ಬೆಳೆಗೆ ಸದ್ಯ ಕ್ವಿಂಟಲ್ಗೆ ₹ 1500 ರಿಂದ ₹ 1800 ತನಕ ದರ ಇದೆ. ಕಳೆದ ವರ್ಷ ₹ 2800 ತನಕ ಬೆಲೆ ಸಿಕ್ಕಿತ್ತು. ಈ ವರ್ಷ ರೈತರು ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೇ ಚಿಂತಾಜಕ ಸ್ಥಿತಿಯಲ್ಲಿದ್ದಾರೆ.</p>.<p>ಹೀಗಾಗಿ ರೈತರ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲ್ಲೂಕಿನಲ್ಲಿ ಖರೀದಿ ಕೇಂದ್ರ ತೆರೆಯಬೇಕು. ಎಂಎಸ್ಪಿ ದರ ₹ 2400 ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹಧನ ₹ 600 ಸೇರಿಸಿ ಒಟ್ಟು ₹3 ಸಾವಿರ ಪ್ರತಿ ಕ್ವಿಂಟಲ್ಗೆ ದರ ನಿಗದಿ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಲಾಗಿದೆ.</p>.<p>ಈ ವೇಳೆ ಮಾತನಾಡಿದ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ, ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಬೆಳಗಾವಿ ಮಾದರಿಯಲ್ಲಿ ಪ್ರತಿಭಟನೆಯ ಹಾದಿ ಹಿಡಿಯಬೇಕಾಗಿದೆ. ನ.24ರ ಒಳಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಹಾವೇರಿಯಲ್ಲಿ ಹೆದ್ದಾರಿ ತಡೆಗೆ ಮುಂದಾಗುತ್ತೇವೆ ಎಂದರು.</p>.<p>ಗೌರವಾಧ್ಯಕ್ಷ ಮಾಲತೇಶ ಪರಪ್ಪನವರ, ಜಿಲ್ಲಾ ಘಟಕದ ಉಪಾಧ್ಯಕ್ಷ ಅಡಿವೆಪ್ಪ ಆದಲಕಟ್ಟಿ, ಪ್ರಮುಖರಾದ ಮಹೇಶ ವಿರುಪಣ್ಣನವರ, ಶ್ರೀಕಾಂತ ದುಂಡಣ್ಣನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ರಾಜೀವ ದಾನಪ್ಪನವರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ಗೋವಿನಜೋಳ ಬೆಳೆಗೆ ಬೆಲೆ ನಿಗದಿ ಮತ್ತು ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಬುಧವಾರ ರೈತ ಸಂಘದಿಂದ ತಹಶೀಲ್ದಾರ್ ರೇಣುಕಾ.ಎಸ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಸತತ ಮಳೆಯಿಂದ ಬೆಳೆಗಳು ಹಾನಿಯಾಗಿ ರೈತರ ಕೈಗೆ ಸಿಗದಂತಾಗಿವೆ. ಸಾಲ ಮಾಡಿ ರೈತರು ಕಂಗಾಲಾಗಿದ್ದಾರೆ. ಅಲ್ಪಸ್ವಲ್ಪ ಬೆಳೆದ ಗೋವಿಜೋಳ ಬೆಳೆಗೆ ಸದ್ಯ ಕ್ವಿಂಟಲ್ಗೆ ₹ 1500 ರಿಂದ ₹ 1800 ತನಕ ದರ ಇದೆ. ಕಳೆದ ವರ್ಷ ₹ 2800 ತನಕ ಬೆಲೆ ಸಿಕ್ಕಿತ್ತು. ಈ ವರ್ಷ ರೈತರು ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೇ ಚಿಂತಾಜಕ ಸ್ಥಿತಿಯಲ್ಲಿದ್ದಾರೆ.</p>.<p>ಹೀಗಾಗಿ ರೈತರ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲ್ಲೂಕಿನಲ್ಲಿ ಖರೀದಿ ಕೇಂದ್ರ ತೆರೆಯಬೇಕು. ಎಂಎಸ್ಪಿ ದರ ₹ 2400 ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹಧನ ₹ 600 ಸೇರಿಸಿ ಒಟ್ಟು ₹3 ಸಾವಿರ ಪ್ರತಿ ಕ್ವಿಂಟಲ್ಗೆ ದರ ನಿಗದಿ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಲಾಗಿದೆ.</p>.<p>ಈ ವೇಳೆ ಮಾತನಾಡಿದ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ, ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಬೆಳಗಾವಿ ಮಾದರಿಯಲ್ಲಿ ಪ್ರತಿಭಟನೆಯ ಹಾದಿ ಹಿಡಿಯಬೇಕಾಗಿದೆ. ನ.24ರ ಒಳಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಹಾವೇರಿಯಲ್ಲಿ ಹೆದ್ದಾರಿ ತಡೆಗೆ ಮುಂದಾಗುತ್ತೇವೆ ಎಂದರು.</p>.<p>ಗೌರವಾಧ್ಯಕ್ಷ ಮಾಲತೇಶ ಪರಪ್ಪನವರ, ಜಿಲ್ಲಾ ಘಟಕದ ಉಪಾಧ್ಯಕ್ಷ ಅಡಿವೆಪ್ಪ ಆದಲಕಟ್ಟಿ, ಪ್ರಮುಖರಾದ ಮಹೇಶ ವಿರುಪಣ್ಣನವರ, ಶ್ರೀಕಾಂತ ದುಂಡಣ್ಣನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ರಾಜೀವ ದಾನಪ್ಪನವರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>