ಹುಬ್ಬಳ್ಳಿ ಸಮೀಪದ ಛಬ್ಬಿ ಕ್ರಾಸ್ನಲ್ಲಿರುವ ಬಸವರಾಜ ಹೊರಟ್ಟಿ ಅವರ ನಿಸರ್ಗ ಫಾರ್ಮ್ ಹೌಸ್ನಲ್ಲಿ ಶನಿವಾರ ಹೊರಟ್ಟಿ ಅವರು ಮಲ್ಲಿಕಾರ್ಜುನ ಅವರಿಗೆ ಆದೇಶ ಪತ್ರ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಹೊರಟ್ಟಿ ‘ಎಚ್.ಡಿ. ದೇವೇಗೌಡರು ಮತ್ತು ಕುಮಾರಸ್ವಾಮಿ ಸೂಚನೆ ಮೇರೆಗೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟಗಳ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಲಾಗಿದೆ. ಗ್ರಾಮಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು. ಗ್ರಾಮ ಪಂಚಾಯ್ತಿ ಚುನಾವಣೆ ಎದುರಿಸಲು ಈಗಿನಿಂದಲೇ ಸಿದ್ಧತೆ ನಡೆಸಬೇಕು’ ಎಂದರು.