<p><strong>ಗುತ್ತಲ (ಹಾವೇರಿ): </strong>ಶಾಲಾ ಆವರಣದಲ್ಲಿ ಯುವಕರ ಗುಂಪೊಂದು ಮಾರಕಾಸ್ತ್ರ (ಲಾಂಗ್) ಬಳಸಿ ಕೇಕ್ ಕತ್ತರಿಸುವ ಮೂಲಕ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.</p>.<p>ಸಮೀಪದ ಹೊಸರಿತ್ತಿ ಗ್ರಾಮದ ಸರ್ಕಾರಿ ಉರ್ದು ಶಾಲೆಯಲ್ಲಿ ಸಾಧಿಕ್ ಹವಾಲ್ದಾರ್ ಎಂಬ ಯುವಕ ತನ್ನ ಸ್ನೇಹಿತರೊಂದಿಗೆ ಲಾಂಗ್ ಬಳಸಿ ಕೇಕ್ಗಳನ್ನು ಕತ್ತರಿಸುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ʼಸ್ವಾತಂತ್ರ್ಯ ಹೋರಾಟಗಾರರು ಜನಿಸಿರುವ ಪುಣ್ಯ ನೆಲದಲ್ಲಿ ಯುವಕರು ಈ ರೀತಿಯ ಪುಂಡಾಟಿಕೆ ಮಾಡುತ್ತಿರುವುದು ನಾಚಿಕೆಗೇಡಿನ ವಿಷಯವಾಗಿದೆ. ಇದೇ ರೀತಿ ಮುಂದುವರಿದರೆ ಗ್ರಾಮದಲ್ಲಿ ರೌಡಿಸಂ ತಲೆ ಎತ್ತುವುದರಲ್ಲಿ ಸಂದೇಹವಿಲ್ಲʼ ಎಂದು ಗ್ರಾಮದ ಹಿರಿಯರು ಕಳವಳ ವ್ಯಕ್ತಪಡಿಸಿದರು.</p>.<p>ಇಂತಹ ಘಟನೆಗಳು ಮರುಕಳಿಸದಂತೆ ಯುವಕ ಹಾಗೂ ಆತನ ಸ್ನೇಹಿತರ ಮೇಲೆ ಪೋಲಿಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಹಾವೇರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ ’ಪ್ರಜಾವಾಣಿ ಪತ್ರಿಕೆ’ಯೊಂದಿಗೆ ಮಾತನಾಡಿ, ಇಂತಹ ಘಟನೆಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡುತ್ತವೆ. ಘಟನೆ ತಿಳಿದ ತಕ್ಷಣ ಆರೋಪಿಯನ್ನು ಬಂಧಿಸಿದ್ದೇವೆ' ಎಂದು ತಿಳಿಸಿದರು.</p>.<p>ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಲ (ಹಾವೇರಿ): </strong>ಶಾಲಾ ಆವರಣದಲ್ಲಿ ಯುವಕರ ಗುಂಪೊಂದು ಮಾರಕಾಸ್ತ್ರ (ಲಾಂಗ್) ಬಳಸಿ ಕೇಕ್ ಕತ್ತರಿಸುವ ಮೂಲಕ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.</p>.<p>ಸಮೀಪದ ಹೊಸರಿತ್ತಿ ಗ್ರಾಮದ ಸರ್ಕಾರಿ ಉರ್ದು ಶಾಲೆಯಲ್ಲಿ ಸಾಧಿಕ್ ಹವಾಲ್ದಾರ್ ಎಂಬ ಯುವಕ ತನ್ನ ಸ್ನೇಹಿತರೊಂದಿಗೆ ಲಾಂಗ್ ಬಳಸಿ ಕೇಕ್ಗಳನ್ನು ಕತ್ತರಿಸುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ʼಸ್ವಾತಂತ್ರ್ಯ ಹೋರಾಟಗಾರರು ಜನಿಸಿರುವ ಪುಣ್ಯ ನೆಲದಲ್ಲಿ ಯುವಕರು ಈ ರೀತಿಯ ಪುಂಡಾಟಿಕೆ ಮಾಡುತ್ತಿರುವುದು ನಾಚಿಕೆಗೇಡಿನ ವಿಷಯವಾಗಿದೆ. ಇದೇ ರೀತಿ ಮುಂದುವರಿದರೆ ಗ್ರಾಮದಲ್ಲಿ ರೌಡಿಸಂ ತಲೆ ಎತ್ತುವುದರಲ್ಲಿ ಸಂದೇಹವಿಲ್ಲʼ ಎಂದು ಗ್ರಾಮದ ಹಿರಿಯರು ಕಳವಳ ವ್ಯಕ್ತಪಡಿಸಿದರು.</p>.<p>ಇಂತಹ ಘಟನೆಗಳು ಮರುಕಳಿಸದಂತೆ ಯುವಕ ಹಾಗೂ ಆತನ ಸ್ನೇಹಿತರ ಮೇಲೆ ಪೋಲಿಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಹಾವೇರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ ’ಪ್ರಜಾವಾಣಿ ಪತ್ರಿಕೆ’ಯೊಂದಿಗೆ ಮಾತನಾಡಿ, ಇಂತಹ ಘಟನೆಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡುತ್ತವೆ. ಘಟನೆ ತಿಳಿದ ತಕ್ಷಣ ಆರೋಪಿಯನ್ನು ಬಂಧಿಸಿದ್ದೇವೆ' ಎಂದು ತಿಳಿಸಿದರು.</p>.<p>ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>