ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,ಜಿ.ಎಂ ಶುಗರ್ಸ್ ಮತ್ತು ಎನರ್ಜಿ ಲಿ.ನವರು ಸಕ್ಕರೆ ಕಾರ್ಖಾನೆ ಸ್ಥಾಪಿಸುವುದಾಗಿ ಹೇಳಿ 1 ಎಕರೆ 20 ಗುಂಟೆ ಜಾಗವನ್ನು ಪಡೆದಿದ್ದಾರೆ. ಮಂಜೂರಾದ ಜಾಗಬಿಟ್ಟು ಅನಧಿಕೃತ ಜಾಗದಲ್ಲಿ ಕ್ರಷರ್ಗಳಿಂದ ಕಲ್ಲು ಗಣಿಗಾರಿಕೆಯನ್ನು ಆರಂಭಿಸಿ ಸಾವಿರಾರು ಲೋಡ್ ಜಲ್ಲಿಕಲ್ಲನ್ನು ಸಂಗ್ರಹಿಸಿದ್ದಾರೆ. ಕೂಡಲೇ ಕ್ರಷರ್ ಯಂತ್ರಗಳನ್ನು ಮುಟ್ಟುಗೋಲು ಹಾಕಿಕೊಂಡು, ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.