<p><strong>ಹಾನಗಲ್:</strong> ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇವೆ ವತಿಯಿಂದ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿ ಮತ್ತು ಪುರಸಭೆ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.</p>.<p>ಕನ್ನಡ ಪರ ಸಂಘಟನೆಗಳ ಹಲವಾರು ವರ್ಷಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕಡ್ಡಾಯವಾಗಿ ಶೇ60 ರಷ್ಟು ಕನ್ನಡ ಬಳಸಿ ನಾಮಫಲಕ ಅಳವಡಿಕೆಗೆ ಆದೇಶ ಹೊರಡಿಸಿದೆ. ಹಾನಗಲ್ ಪಟ್ಟಣ ಮತ್ತು ತಾಲ್ಲೂಕಿನ ಪ್ರಮುಖ ಗ್ರಾಮಗಳಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕ ಕನ್ನಡ ಬಳಕೆಯ ಸರ್ಕಾರದ ಮಾರ್ಗಸೂಚಿ ಪಾಲನೆ ಕಾಣುತ್ತಿಲ್ಲ. </p> <p>15 ದಿನಗಳ ಒಳಗಾಗಿ ಶೇ60 ರಷ್ಟು ಕನ್ನಡ ಪದ ಬಳಕೆಯ ನಾಮಫಲಕ ಬಳಸದಿದ್ದರೆ, ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಅಂತಹ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಹಮ್ಮಿಕೊಳ್ಳುತ್ತೇವೆ’ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.</p>.<p>ಸ್ವಾಭಿಮಾನ ಬಣದ ಜಿಲ್ಲಾ ಘಟಕದ ಅಧ್ಯಕ್ಷ ರಾಮು ತಳವಾರ, ಗೌರವಾಧ್ಯಕ್ಷ ಎಂ.ಕೆ.ತಿಮ್ಮಾಪೂರ, ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ಮುದಿಗೌಡ್ರ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಸುಮಾ, ಉಪಾಧ್ಯಕ್ಷೆ ಪ್ರೇಮಾ ಮುದಿಗೌಡ್ರ, ಗೀತಾ ಹಳಕೊಪ್ಪ, ಅರ್ಬಾಜ್ ಇನಾಂದಾರ್, ಪವನ ಹರಿಜನ, ರೋಶನ್ಬೇಗ್ ಸವಣೂರ, ಬಸವರಾಜ ಬಸಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್:</strong> ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇವೆ ವತಿಯಿಂದ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿ ಮತ್ತು ಪುರಸಭೆ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.</p>.<p>ಕನ್ನಡ ಪರ ಸಂಘಟನೆಗಳ ಹಲವಾರು ವರ್ಷಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕಡ್ಡಾಯವಾಗಿ ಶೇ60 ರಷ್ಟು ಕನ್ನಡ ಬಳಸಿ ನಾಮಫಲಕ ಅಳವಡಿಕೆಗೆ ಆದೇಶ ಹೊರಡಿಸಿದೆ. ಹಾನಗಲ್ ಪಟ್ಟಣ ಮತ್ತು ತಾಲ್ಲೂಕಿನ ಪ್ರಮುಖ ಗ್ರಾಮಗಳಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕ ಕನ್ನಡ ಬಳಕೆಯ ಸರ್ಕಾರದ ಮಾರ್ಗಸೂಚಿ ಪಾಲನೆ ಕಾಣುತ್ತಿಲ್ಲ. </p> <p>15 ದಿನಗಳ ಒಳಗಾಗಿ ಶೇ60 ರಷ್ಟು ಕನ್ನಡ ಪದ ಬಳಕೆಯ ನಾಮಫಲಕ ಬಳಸದಿದ್ದರೆ, ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಅಂತಹ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಹಮ್ಮಿಕೊಳ್ಳುತ್ತೇವೆ’ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.</p>.<p>ಸ್ವಾಭಿಮಾನ ಬಣದ ಜಿಲ್ಲಾ ಘಟಕದ ಅಧ್ಯಕ್ಷ ರಾಮು ತಳವಾರ, ಗೌರವಾಧ್ಯಕ್ಷ ಎಂ.ಕೆ.ತಿಮ್ಮಾಪೂರ, ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ಮುದಿಗೌಡ್ರ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಸುಮಾ, ಉಪಾಧ್ಯಕ್ಷೆ ಪ್ರೇಮಾ ಮುದಿಗೌಡ್ರ, ಗೀತಾ ಹಳಕೊಪ್ಪ, ಅರ್ಬಾಜ್ ಇನಾಂದಾರ್, ಪವನ ಹರಿಜನ, ರೋಶನ್ಬೇಗ್ ಸವಣೂರ, ಬಸವರಾಜ ಬಸಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>