ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್: ಮಾನೆ–ತಹಶೀಲ್ದಾರ್‌ ಸಂಧಾನ

ಶ್ರೀನಿವಾಸ ಮಾನೆಗೆ ಟಿಕೆಟ್‌, ಘೋಷಣೆಯಷ್ಟೇ ಬಾಕಿ: ಪುಟ್ಟಪ್ಪ ನರೇಗಲ್‌
Last Updated 2 ಅಕ್ಟೋಬರ್ 2021, 17:15 IST
ಅಕ್ಷರ ಗಾತ್ರ

ಹಾನಗಲ್: ‘ಶ್ರೀನಿವಾಸ ಮಾನೆ ಅವರಿಗೆ ಟಿಕೆಟ್ ಪೈನಲ್ ಆಗಿದೆ. ಕಾಂಗ್ರೆಸ್‌ ವರಿಷ್ಠರಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಎರಡು ದಿನಗಳಲ್ಲಿ ಶ್ರೀನಿವಾಸ ಮಾನೆ ಹಾನಗಲ್‌ಗೆ ಬರಲಿದ್ದಾರೆ’ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪುಟ್ಟಪ್ಪ ನರೇಗಲ್ ಹೇಳಿದರು.

ಶ್ರೀನಿವಾಸ ಮಾನೆ ಮತ್ತು ಮನೋಹರ ತಹಶೀಲ್ದಾರ್ ಸಂಧಾನ ಸಫಲವಾಗಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಸಿಕ್ಕಂತಾಗಿದೆ. ಸಂಘಟನೆ ದೃಷ್ಟಿಯಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಸದೃಢವಾಗಿದೆ ಎಂದು ಶನಿವಾರ ಇಲ್ಲಿನ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷದ ನಾಯಕರಲ್ಲಿ ಭಿನ್ನಾಭಿಪ್ರಾಯ ಶಮನವಾಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಆಂತರಿಕ ಪ್ರಜಾಪ್ರಭುತ್ವ ನಮ್ಮಲ್ಲಿದೆ. ಉಪ ಚುನಾವಣೆಗೆ ಆಕಾಂಕ್ಷಿತರು ಅಧಿಕವಾಗುವುದು ಸಹಜ ಎಂದರು.

ಈಗಾಗಲೇ ಸಾಕಷ್ಟು ಗ್ರಾಮಗಳಲ್ಲಿ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರ ಸಭೆಗಳನ್ನು ಮಾಡಿದ್ದೇವೆ. ವ್ಯವಸ್ಥಿತ ಚುನಾವಣಾ ಪ್ರಚಾರಕ್ಕಾಗಿ ಪ್ರತಿಯೊಂದು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ತಂಡ ರಚಿಸಲಾಗಿದೆ. ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಪ್ರಚಾರ ಸಮಿತಿಗಳು ಸಿದ್ಧಗೊಂಡಿವೆ. ಪ್ರಚಾರ ಕಾರ್ಯಕ್ಕಾಗಿ ಆಗಮಿಸುವ ತಾರಾ ಪ್ರಚಾಕರುಮಾರ್ಗದರ್ಶಿಯಾಗಿ ವಿವಿಧ ಸಮಿತಿಗಳು ಕೆಲಸ ಮಾಡಲಿವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT