ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಗ್ಗಾವಿ: ಸಾರಿಗೆ ಸಂಸ್ಥೆ ಬಸ್‌ ಉರುಳಿ 17 ಮಂದಿಗೆ ಗಾಯ

Last Updated 3 ಜೂನ್ 2022, 13:49 IST
ಅಕ್ಷರ ಗಾತ್ರ

ಹಾವೇರಿ: ಶಿಗ್ಗಾವಿ ಪಟ್ಟಣದ ರಂಭಾಪುರಿ ಕಾಲೇಜು ಸಮೀಪ ಸಾರಿಗೆ ಸಂಸ್ಥೆ ಬಸ್‌ ಉರುಳಿ 17 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಹುಬ್ಬಳ್ಳಿಯಿಂದ ಹಾವೇರಿಗೆ ಬರುತ್ತಿದ್ದ ಸಾರಿಗೆ ಬಸ್‌ನಲ್ಲಿ ಒಟ್ಟು 21 ಪ್ರಯಾಣಿಕರಿದ್ದರು. ಅದರಲ್ಲಿ 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶಿಗ್ಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 4 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಶಿಗ್ಗಾವಿ ಪಟ್ಟಣದ ಚಾಲಕ ಗುರುಸಿದ್ದಪ್ಪ ರಣತೋರ್‌ ಕೂಡ ಗಾಯಗೊಂಡಿದ್ದಾರೆ.

ಹಾವೇರಿ ಡಿಪೋಗೆ ಸೇರಿದ ಬಸ್‌ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ಇಳಿಯುವಾಗ, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದಲ್ಲಿದ್ದ ಹೊಲದಲ್ಲಿ ಉರುಳಿ ಬಿದ್ದಿದೆ. ಬಸ್‌ ಗಾಜುಗಳು ಪುಡಿಪುಡಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT