ಹುಬ್ಬಳ್ಳಿಯಿಂದ ಹಾವೇರಿಗೆ ಬರುತ್ತಿದ್ದ ಸಾರಿಗೆ ಬಸ್ನಲ್ಲಿ ಒಟ್ಟು 21 ಪ್ರಯಾಣಿಕರಿದ್ದರು. ಅದರಲ್ಲಿ 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶಿಗ್ಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 4 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಶಿಗ್ಗಾವಿ ಪಟ್ಟಣದ ಚಾಲಕ ಗುರುಸಿದ್ದಪ್ಪ ರಣತೋರ್ ಕೂಡ ಗಾಯಗೊಂಡಿದ್ದಾರೆ.