<p><strong>ಬ್ಯಾಡಗಿ</strong>: ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿಯ ಬದುಕು, ಪರಸ್ಪರ ಪ್ರೀತಿ ವಿಶ್ವಾಸ ವೃದ್ಧಿಸಲಿದೆ ಎಂದು ವೇದಮೂರ್ತಿ ರಾಚಯ್ಯ ಓದಿಸೋಮಠ ಹೇಳಿದರು.</p>.<p>ಪಟ್ಟಣದ ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ ದೇವಸ್ಥಾನಗಳ 69ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರೂ ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಬೇಕಾಗಿದೆ. ಸಮಾಜವನ್ನು ಕಾಡುತ್ತಿರುವ ವರದಕ್ಷಿಣಿ ನಿರ್ಮೂಲನೆಗೆ ಎಲ್ಲರೂ ಸಂಕಲ್ಪ ಮಾಡಬೇಕಾಗಿದೆ ಎಂದರು.</p>.<p>ಜಾತ್ರಾ ಸಮಿತಿ ಅಧ್ಯಕ್ಷ ಮಲ್ಲಣ್ಣ ಹುಚಗೊಂಡರ ಮಾತನಾಡಿ, ಸಮಾಜದಲ್ಲಿ ಆರ್ಥಿಕ ಹೊರೆಯಿಂದ ಬಳಲುತ್ತಿರುವ ಕುಟುಂಬಗಳ ಹಿತ ಕಾಯಲು ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಸಾಮೂಹಿಕ ವಿವಾಹ ನೆರವೇರಿಸಗುತ್ತದೆ ಎಂದರು.</p>.<p>ಕಾರ್ಯದರ್ಶಿ ಮಾಲತೇಶ ಅರಳಿಮಟ್ಟಿ ಮತನಾಡಿ, ಇಂದಿನ ದುಬಾರಿ ಕಾಲದಲ್ಲಿ ಮನೆ ಕಟ್ಟುವುದು, ಮದುವೆ ಮಾಡುವುದು ಬಹಳ ಕಷ್ಟ. ಮದುವೆ ಸಾಲದಿಂದ ಎಷ್ಟೋ ಕುಟುಂಬಗಳು ವಿಘಟಿತವಾಗುತ್ತಿವೆ. ಇದನ್ನು ಮನಗಂಡು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.</p>.<p>ಖಜಾಂಚಿ ಶಂಭುಲಿಂಗಪ್ಪ ಅಂಗಡಿ, ಸದಸ್ಯರಾದ ಚಂದ್ರಶೇಖರಯ್ಯ ಆಳದಗೇರಿ, ಶಿವಣ್ಣ ಶೆಟ್ಟರ, ಗಂಗಾಧರ ತಿಳವಳ್ಳಿ ಶಿವಣ್ಣ ಬಣಕಾರ, ಧಾರ್ಮಿಕ ಪಾಠಶಾಲೆಯ ವಠುಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿಯ ಬದುಕು, ಪರಸ್ಪರ ಪ್ರೀತಿ ವಿಶ್ವಾಸ ವೃದ್ಧಿಸಲಿದೆ ಎಂದು ವೇದಮೂರ್ತಿ ರಾಚಯ್ಯ ಓದಿಸೋಮಠ ಹೇಳಿದರು.</p>.<p>ಪಟ್ಟಣದ ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ ದೇವಸ್ಥಾನಗಳ 69ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರೂ ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಬೇಕಾಗಿದೆ. ಸಮಾಜವನ್ನು ಕಾಡುತ್ತಿರುವ ವರದಕ್ಷಿಣಿ ನಿರ್ಮೂಲನೆಗೆ ಎಲ್ಲರೂ ಸಂಕಲ್ಪ ಮಾಡಬೇಕಾಗಿದೆ ಎಂದರು.</p>.<p>ಜಾತ್ರಾ ಸಮಿತಿ ಅಧ್ಯಕ್ಷ ಮಲ್ಲಣ್ಣ ಹುಚಗೊಂಡರ ಮಾತನಾಡಿ, ಸಮಾಜದಲ್ಲಿ ಆರ್ಥಿಕ ಹೊರೆಯಿಂದ ಬಳಲುತ್ತಿರುವ ಕುಟುಂಬಗಳ ಹಿತ ಕಾಯಲು ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಸಾಮೂಹಿಕ ವಿವಾಹ ನೆರವೇರಿಸಗುತ್ತದೆ ಎಂದರು.</p>.<p>ಕಾರ್ಯದರ್ಶಿ ಮಾಲತೇಶ ಅರಳಿಮಟ್ಟಿ ಮತನಾಡಿ, ಇಂದಿನ ದುಬಾರಿ ಕಾಲದಲ್ಲಿ ಮನೆ ಕಟ್ಟುವುದು, ಮದುವೆ ಮಾಡುವುದು ಬಹಳ ಕಷ್ಟ. ಮದುವೆ ಸಾಲದಿಂದ ಎಷ್ಟೋ ಕುಟುಂಬಗಳು ವಿಘಟಿತವಾಗುತ್ತಿವೆ. ಇದನ್ನು ಮನಗಂಡು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.</p>.<p>ಖಜಾಂಚಿ ಶಂಭುಲಿಂಗಪ್ಪ ಅಂಗಡಿ, ಸದಸ್ಯರಾದ ಚಂದ್ರಶೇಖರಯ್ಯ ಆಳದಗೇರಿ, ಶಿವಣ್ಣ ಶೆಟ್ಟರ, ಗಂಗಾಧರ ತಿಳವಳ್ಳಿ ಶಿವಣ್ಣ ಬಣಕಾರ, ಧಾರ್ಮಿಕ ಪಾಠಶಾಲೆಯ ವಠುಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>