<p><strong>ಹಾವೇರಿ:</strong> ‘ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆ.19ರಂದು ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ದೃಶ್ಯ ಸಂವಾದ ಮೂಲಕ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಕಾನೂನುಬದ್ಧವಾಗಿ ರಾಜಿ ಸಂಧಾನವಾಗಲು ಅವಕಾಶವಿರುವ ಎಲ್ಲ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಕೊಳ್ಳಬಹುದಾಗಿದೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಎಚ್.ರೇಣುಕಾದೇವಿ ತಿಳಿಸಿದ್ದಾರೆ.</p>.<p>ನಗರದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಇ-ಲೋಕ ಅದಾಲತ್ ಕುರಿತ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್ ಹಿನ್ನೆಲೆಯಲ್ಲಿ ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಂದು ಇ-ಲೋಕ ಅದಾಲತ್ಗೆ ಪ್ರತ್ಯೇಕವಾಗಿ ಒಬ್ಬರು ನ್ಯಾಯಾಧೀಶರು ಹಾಗೂ ನುರಿತ ನ್ಯಾಯವಾದಿಗಳು ಸಂಧಾನಕಾರರಾಗಿ ಕಾರ್ಯನಿರ್ವಹಿಸುತ್ತಾರೆ.ಇ- ಲೋಕ ಅದಾಲತ್ನಲ್ಲಿ ಇತ್ಯರ್ಥವಾದ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲ್ಲಿ ಎರಡು ಕಡೆಯ ಪಕ್ಷಗಾರರು ತಮ್ಮ ವ್ಯಾಜ್ಯಗಳಿಗೆ ಸೌಹಾರ್ದಯುತವಾಗಿ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.</p>.<p>ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎ.ವಿ. ಪಾಟೀಲ, ಜಿಲ್ಲಾ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿ.ಆರ್.ಗುಡಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀ ಎನ್.ಗರಗ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿ.ವೈ.ಎಸ್.ಪಿ. ವಿಜಯಕುಮಾರ ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆ.19ರಂದು ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ದೃಶ್ಯ ಸಂವಾದ ಮೂಲಕ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಕಾನೂನುಬದ್ಧವಾಗಿ ರಾಜಿ ಸಂಧಾನವಾಗಲು ಅವಕಾಶವಿರುವ ಎಲ್ಲ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಕೊಳ್ಳಬಹುದಾಗಿದೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಎಚ್.ರೇಣುಕಾದೇವಿ ತಿಳಿಸಿದ್ದಾರೆ.</p>.<p>ನಗರದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಇ-ಲೋಕ ಅದಾಲತ್ ಕುರಿತ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್ ಹಿನ್ನೆಲೆಯಲ್ಲಿ ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಂದು ಇ-ಲೋಕ ಅದಾಲತ್ಗೆ ಪ್ರತ್ಯೇಕವಾಗಿ ಒಬ್ಬರು ನ್ಯಾಯಾಧೀಶರು ಹಾಗೂ ನುರಿತ ನ್ಯಾಯವಾದಿಗಳು ಸಂಧಾನಕಾರರಾಗಿ ಕಾರ್ಯನಿರ್ವಹಿಸುತ್ತಾರೆ.ಇ- ಲೋಕ ಅದಾಲತ್ನಲ್ಲಿ ಇತ್ಯರ್ಥವಾದ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲ್ಲಿ ಎರಡು ಕಡೆಯ ಪಕ್ಷಗಾರರು ತಮ್ಮ ವ್ಯಾಜ್ಯಗಳಿಗೆ ಸೌಹಾರ್ದಯುತವಾಗಿ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.</p>.<p>ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎ.ವಿ. ಪಾಟೀಲ, ಜಿಲ್ಲಾ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿ.ಆರ್.ಗುಡಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀ ಎನ್.ಗರಗ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿ.ವೈ.ಎಸ್.ಪಿ. ವಿಜಯಕುಮಾರ ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>