<p><strong>ರಟ್ಟೀಹಳ್ಳಿ:</strong> ‘20 ವರ್ಷಗಳ ಮನರೇಗಾ ಯೋಜನೆಯನ್ನು ಕೇವಲ 7 ಗಂಟೆ ಚರ್ಚಿಸಿ ಕಾಯ್ದೆ ಬದಲಾಯಿಸಿದ್ದು, ಮೋದಿ ಸರ್ಕಾರ ಮಹಾತ್ಮ ಗಾಂಧೀಜಿಗೆ ಮಾಡಿದ ದೊಡ್ಡ ಅಪಮಾನ. ಇದನ್ನು ರಾಷ್ಟ್ರದ ಜನತೆ ಕ್ಷಮಿಸಲು ಸಾಧ್ಯವಿಲ್ಲ’ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.</p>.<p>ತಾಲ್ಲೂಕಿನ ಗುಂಡಗಟ್ಟಿ ಗ್ರಾಮದಿಂದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಹೊರಟು ಇಂಗಳಗೊಂದಿ, ಸತ್ತಗಿಹಳ್ಳಿ, ಶಿರಗಂಬಿ, ಮಾರ್ಗವಾಗಿ ಮನರೇಗಾ ಯೋಜನೆ ಬೆಂಬಲಿಸಿ ಶನಿವಾರ ಸುಮಾರು 15 ಕಿ.ಮೀ. ಪಾದಯಾತ್ರೆಯೊಂದಿಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು.</p>.<p>ದಾರಿಯುದ್ದಕ್ಕೂ ಗ್ರಾಮಗಳ ಜನರನ್ನು ಸಂಪರ್ಕಿಸಿ ಮನರೇಗಾ ಯೋಜನೆ ಬಡವರಿಗೆ ವರದಾನವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಬದಲಾಯಿಸಿ, ಬಡ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದರು.</p>.<p>ಬಡವರ ಪರವಾದ ಈ ಯೋಜನೆಯನ್ನು ಮುಂದುವರಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದಿಂದ ನಿರಂತರ ಪ್ರತಿಭಟನೆ ನಡೆಯಲಿದೆ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.</p>.<p>ಮಾಜಿ ಶಾಸಕ ಬಿ.ಎಚ್.ಬನ್ನಿಕೋಡ ಮಾತನಾಡಿ, ‘ಬಡವರಿಗಾಗಿ ಮನರೇಗಾ ಯೋಜನೆ ಜಾರಿಯಲ್ಲಿದ್ದು, ಅದನ್ನು ಬದಲಿಸಿರುವ ಕೇಂದ್ರ ಸರ್ಕಾರದ ಧೋರಣೆ ಸರಿಯಲ್ಲ, ಕೇಂದ್ರದ ಮೋದಿ ಸರ್ಕಾರ ಕೇವಲ ಶ್ರೀಮಂತರಿಗೆ ಕಾಯ್ದೆ ರೂಪಿಸುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.</p>.<p>ಮುಖಂಡರಾದ ಮೋಹನ ಲಿಂಬೆಕಾಯಿ, ಸಂಜೀವಕುಮಾರ ನೀರಲಗಿ, ವಸಂತ ದ್ಯಾವಕ್ಕಳವರ, ಪಿ.ಡಿ. ಬಸನಗೌಡ್ರ, ನಿಂಗಪ್ಪ ಚಳಗೇರಿ, ಹನುಮಂತಗೌಡ ಭರಮಣ್ಣನವರ, ಮಹೇಶ ಗುಬ್ಬಿ, ಸರ್ಪರಾಜ ಮಾಸೂರು, ಬಾಬುಸಾಬ ಜಡದಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ:</strong> ‘20 ವರ್ಷಗಳ ಮನರೇಗಾ ಯೋಜನೆಯನ್ನು ಕೇವಲ 7 ಗಂಟೆ ಚರ್ಚಿಸಿ ಕಾಯ್ದೆ ಬದಲಾಯಿಸಿದ್ದು, ಮೋದಿ ಸರ್ಕಾರ ಮಹಾತ್ಮ ಗಾಂಧೀಜಿಗೆ ಮಾಡಿದ ದೊಡ್ಡ ಅಪಮಾನ. ಇದನ್ನು ರಾಷ್ಟ್ರದ ಜನತೆ ಕ್ಷಮಿಸಲು ಸಾಧ್ಯವಿಲ್ಲ’ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.</p>.<p>ತಾಲ್ಲೂಕಿನ ಗುಂಡಗಟ್ಟಿ ಗ್ರಾಮದಿಂದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಹೊರಟು ಇಂಗಳಗೊಂದಿ, ಸತ್ತಗಿಹಳ್ಳಿ, ಶಿರಗಂಬಿ, ಮಾರ್ಗವಾಗಿ ಮನರೇಗಾ ಯೋಜನೆ ಬೆಂಬಲಿಸಿ ಶನಿವಾರ ಸುಮಾರು 15 ಕಿ.ಮೀ. ಪಾದಯಾತ್ರೆಯೊಂದಿಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು.</p>.<p>ದಾರಿಯುದ್ದಕ್ಕೂ ಗ್ರಾಮಗಳ ಜನರನ್ನು ಸಂಪರ್ಕಿಸಿ ಮನರೇಗಾ ಯೋಜನೆ ಬಡವರಿಗೆ ವರದಾನವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಬದಲಾಯಿಸಿ, ಬಡ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದರು.</p>.<p>ಬಡವರ ಪರವಾದ ಈ ಯೋಜನೆಯನ್ನು ಮುಂದುವರಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದಿಂದ ನಿರಂತರ ಪ್ರತಿಭಟನೆ ನಡೆಯಲಿದೆ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.</p>.<p>ಮಾಜಿ ಶಾಸಕ ಬಿ.ಎಚ್.ಬನ್ನಿಕೋಡ ಮಾತನಾಡಿ, ‘ಬಡವರಿಗಾಗಿ ಮನರೇಗಾ ಯೋಜನೆ ಜಾರಿಯಲ್ಲಿದ್ದು, ಅದನ್ನು ಬದಲಿಸಿರುವ ಕೇಂದ್ರ ಸರ್ಕಾರದ ಧೋರಣೆ ಸರಿಯಲ್ಲ, ಕೇಂದ್ರದ ಮೋದಿ ಸರ್ಕಾರ ಕೇವಲ ಶ್ರೀಮಂತರಿಗೆ ಕಾಯ್ದೆ ರೂಪಿಸುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.</p>.<p>ಮುಖಂಡರಾದ ಮೋಹನ ಲಿಂಬೆಕಾಯಿ, ಸಂಜೀವಕುಮಾರ ನೀರಲಗಿ, ವಸಂತ ದ್ಯಾವಕ್ಕಳವರ, ಪಿ.ಡಿ. ಬಸನಗೌಡ್ರ, ನಿಂಗಪ್ಪ ಚಳಗೇರಿ, ಹನುಮಂತಗೌಡ ಭರಮಣ್ಣನವರ, ಮಹೇಶ ಗುಬ್ಬಿ, ಸರ್ಪರಾಜ ಮಾಸೂರು, ಬಾಬುಸಾಬ ಜಡದಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>