<p><strong>ಹಿರೇಕೆರೂರ: </strong>ಕೋವಿಡ್ 2ನೇ ಅಲೆ ತೀವ್ರವಾಗಿ ಹರಡುತ್ತಿದೆ, ಜ್ವರ-ಕೆಮ್ಮು ಬಂದರೆ ನಿರ್ಲಕ್ಷ್ಯ ಮಾಡದೇ ತಕ್ಷಣ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಸೋಂಕು ಹರಡುವುದನ್ನು ತಡೆಯಲು ತಪ್ಪದೇ ನಿಯಮಾವಳಿ ಪಾಲಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಜನತೆಗೆ ಮನವಿ ಮಾಡಿದರು.</p>.<p>ತಾಲ್ಲೂಕಿನಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಸೋಮವಾರ ವೈಯಕ್ತಿವಾಗಿ ₹ 50 ಸಾವಿರ ಪರಿಹಾರ ಧನ ವಿತರಿಸಿ ಅವರು ಮಾತನಾಡಿದರು. ಕೋವಿಡ್ 2ನೇ ಅಲೆಯಿಂದ ಹಿರೇಕೆರೂರ-ರಟ್ಟೀಹಳ್ಳಿ ತಾಲ್ಲೂಕಿನಲ್ಲಿ 18 ಜನ ಮೃತಪಟ್ಟಿದ್ದಾರೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡು ತೀವ್ರ ನೋವು ಅನುಭವಿಸುತ್ತಿರುವ ಕುಟುಂಬಗಳಿಗೆ ನನ್ನ ಅಳಿಲು ಸೇವೆ ಇದು ಎಂದರು.</p>.<p>ಕೋವಿಡ್ 2ನೇ ಅಲೆ ನಂತರ 3ನೇ ಅಲೆ ಸಹ ಬರಲಿದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದು, ಅದನ್ನು ಎದುರಿಸಲು ನಾವು ಸಿದ್ಧರಾಗಬೇಕಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತೆ ವಹಿಸುವ ಅಗತ್ಯವಿದೆ. ಸೋಂಕು ಹರಡುವುದನ್ನು ತಡೆಯಲು ಪರಸ್ಪರ ಅಂತರ ಕಾಪಾಡಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ತಪ್ಪದೇ ಬಳಸಬೇಕು ಎಂದು ಹೇಳಿದರು.</p>.<p>ಅನಗತ್ಯವಾಗಿ ಹೊರಗೆ ಓಡಾಡುವುದನ್ನು ನಿಲ್ಲಿಸಿ, ಕೋವಿಡ್ ಸೋಂಕು ಕಾಣಿಸಿಕೊಂಡರೆ ಹೋಂ ಐಸೋಲೇಷನ್ ಬೇಡ, ಕೋವಿಡ್ ಕೇರ್ ಸೆಂಟರ್ಗೆ ಬಂದು ಚಿಕಿತ್ಸೆ ಪಡೆಯಿರಿ. ಇದರಿಂದ ನಿಮ್ಮ ಕುಟುಂಬದ ಇತರರಿಗೆ ರೋಗ ಹರಡುವುದನ್ನು ತಡೆಯಬಹುದು ಎಂದು ತಿಳಿಸಿದರು.</p>.<p>ಕೋವಿಡ್ ಸೋಂಕಿನಿಂದ ಮೃತಪಟ್ಟ ತಾಲ್ಲೂಕಿನ ಹಂಸಭಾವಿ ಗ್ರಾಮದ 4 ಕುಟುಂಬಗಳು, ಹಿರೇಕೊಣ್ತಿ, ನಿಟ್ಟೂರು, ಹಂಸಭಾವಿ, ಯೋಗಿಕೊಪ್ಪ, ವಡೆಯನಪುರ, ಅರಳೀಕಟ್ಟಿ, ಆಲದಗೇರಿ ಹಾಗೂ ಕಳಗೊಂಡ ಗ್ರಾಮದ ಮೃತರ ಕುಟುಂಬಗಳನ್ನು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಸ್ವತಃ ಭೇಟಿ ಮಾಡಿ, ₹ 50 ಸಾವಿರ ಪರಿಹಾರ ಧನ ವಿತರಿಸಿದರು.<br />ತಹಶೀಲ್ದಾರ್ ಕೆ.ಎ.ಉಮಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ: </strong>ಕೋವಿಡ್ 2ನೇ ಅಲೆ ತೀವ್ರವಾಗಿ ಹರಡುತ್ತಿದೆ, ಜ್ವರ-ಕೆಮ್ಮು ಬಂದರೆ ನಿರ್ಲಕ್ಷ್ಯ ಮಾಡದೇ ತಕ್ಷಣ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಸೋಂಕು ಹರಡುವುದನ್ನು ತಡೆಯಲು ತಪ್ಪದೇ ನಿಯಮಾವಳಿ ಪಾಲಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಜನತೆಗೆ ಮನವಿ ಮಾಡಿದರು.</p>.<p>ತಾಲ್ಲೂಕಿನಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಸೋಮವಾರ ವೈಯಕ್ತಿವಾಗಿ ₹ 50 ಸಾವಿರ ಪರಿಹಾರ ಧನ ವಿತರಿಸಿ ಅವರು ಮಾತನಾಡಿದರು. ಕೋವಿಡ್ 2ನೇ ಅಲೆಯಿಂದ ಹಿರೇಕೆರೂರ-ರಟ್ಟೀಹಳ್ಳಿ ತಾಲ್ಲೂಕಿನಲ್ಲಿ 18 ಜನ ಮೃತಪಟ್ಟಿದ್ದಾರೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡು ತೀವ್ರ ನೋವು ಅನುಭವಿಸುತ್ತಿರುವ ಕುಟುಂಬಗಳಿಗೆ ನನ್ನ ಅಳಿಲು ಸೇವೆ ಇದು ಎಂದರು.</p>.<p>ಕೋವಿಡ್ 2ನೇ ಅಲೆ ನಂತರ 3ನೇ ಅಲೆ ಸಹ ಬರಲಿದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದು, ಅದನ್ನು ಎದುರಿಸಲು ನಾವು ಸಿದ್ಧರಾಗಬೇಕಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತೆ ವಹಿಸುವ ಅಗತ್ಯವಿದೆ. ಸೋಂಕು ಹರಡುವುದನ್ನು ತಡೆಯಲು ಪರಸ್ಪರ ಅಂತರ ಕಾಪಾಡಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ತಪ್ಪದೇ ಬಳಸಬೇಕು ಎಂದು ಹೇಳಿದರು.</p>.<p>ಅನಗತ್ಯವಾಗಿ ಹೊರಗೆ ಓಡಾಡುವುದನ್ನು ನಿಲ್ಲಿಸಿ, ಕೋವಿಡ್ ಸೋಂಕು ಕಾಣಿಸಿಕೊಂಡರೆ ಹೋಂ ಐಸೋಲೇಷನ್ ಬೇಡ, ಕೋವಿಡ್ ಕೇರ್ ಸೆಂಟರ್ಗೆ ಬಂದು ಚಿಕಿತ್ಸೆ ಪಡೆಯಿರಿ. ಇದರಿಂದ ನಿಮ್ಮ ಕುಟುಂಬದ ಇತರರಿಗೆ ರೋಗ ಹರಡುವುದನ್ನು ತಡೆಯಬಹುದು ಎಂದು ತಿಳಿಸಿದರು.</p>.<p>ಕೋವಿಡ್ ಸೋಂಕಿನಿಂದ ಮೃತಪಟ್ಟ ತಾಲ್ಲೂಕಿನ ಹಂಸಭಾವಿ ಗ್ರಾಮದ 4 ಕುಟುಂಬಗಳು, ಹಿರೇಕೊಣ್ತಿ, ನಿಟ್ಟೂರು, ಹಂಸಭಾವಿ, ಯೋಗಿಕೊಪ್ಪ, ವಡೆಯನಪುರ, ಅರಳೀಕಟ್ಟಿ, ಆಲದಗೇರಿ ಹಾಗೂ ಕಳಗೊಂಡ ಗ್ರಾಮದ ಮೃತರ ಕುಟುಂಬಗಳನ್ನು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಸ್ವತಃ ಭೇಟಿ ಮಾಡಿ, ₹ 50 ಸಾವಿರ ಪರಿಹಾರ ಧನ ವಿತರಿಸಿದರು.<br />ತಹಶೀಲ್ದಾರ್ ಕೆ.ಎ.ಉಮಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>