ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಯಾರಿಗೂ ಟಿಕೆಟ್ ನಿರಾಕರಿಸಿಲ್ಲ. ಪಕ್ಷಕ್ಕೆ ದುಡಿದಂಥ ಶಿವರಾಜ ಸಜ್ಜನರ ಅವರಿಗೆ ಈ ಬಾರಿ ಅವಕಾಶ ಮಾಡಿಕೊಡಲಾಗಿದೆ. ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಆಡಳಿತಾತ್ಮಕ ಅನುಭವ ಮತ್ತು ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಗಮನಿಸಿ ಟಿಕೆಟ್ ನೀಡಲಾಗಿದೆ ಎಂದು ಹೇಳಿದರು.