<p><strong>ಹಾವೇರಿ: ‘</strong>ಮುಂಬರುವ ರಾಜ್ಯದ ಪದವೀಧರರ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ, ಕಾಂಗ್ರೆಸ್ ಪಕ್ಷಕ್ಕೆ ಸತ್ವ ಪರೀಕ್ಷೆ. ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಗೆಲುವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಘಟಕದ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಭೆ’ಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿರುವ ಎಲ್ಲ ಶಾಸಕರು, ನಮ್ಮ ಪಕ್ಷದವರು. ಕ್ರಿಯಾಶೀಲ ಕಾರ್ಯಕರ್ತರೂ ಜಿಲ್ಲೆಯಲ್ಲಿದ್ದಾರೆ. ಯಾವುದೇ ಭಿನ್ನಾಭಿಪ್ರಾಯವಿದ್ದರೂ ಬದಿಗಿಟ್ಟು ಪಕ್ಷದ ಗೆಲುವಿಗೆ ಶ್ರಮಿಸಬೇಕು’ ಎಂದರು.</p>.<p>ಕೆಪಿಸಿಸಿ ರಾಜ್ಯ ಉಸ್ತುವಾರಿ ಮಯೂರ ಜಯಕುಮಾರ ಮಾತನಾಡಿ, ‘ಪದವೀಧರ ಪಶ್ಚಿಮ ಮತಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ನಾಲ್ಕು ಜಿಲ್ಲೆಯ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಜೊತೆಗೆ, ನೂತನ ಮತದಾರರ ನೋಂದಣಿ ಮಾಡಿಸಬೇಕು’ ಎಂದರು.</p>.<p>ಅಭ್ಯರ್ಥಿ ಮೋಹನ ಲಿಂಬಿಕಾಯಿ ಮಾತನಾಡಿ, ‘ಪದವೀಧರರ ಮತದಾನಕ್ಕೆ ಸದಸ್ಯತ್ವ ನೋಂದಣಿಗೆ ಇನ್ನೂ ಸಮಯಾವಕಾಶವಿದೆ. ಈಗಾಗಲೇ ಸದಸ್ಯತ್ವ ಪಡೆದವರು ತಾಂತ್ರಿಕ ತೊಂದರೆ ಅನುಭವಿಸುತ್ತಿರುವ ಕಾರಣಕ್ಕೆ ಸಹಾಯವಾಣಿ ತೆರೆಯಲಾಗಿದೆ. ತಳಮಟ್ಟದಲ್ಲಿ ಪದವೀಧರರನ್ನು ಗುರುತಿಸಿ ಸದಸ್ಯತ್ವ ನೋಂದಣಿ ಮಾಡಿಸಬೇಕು’ ಎಂದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮಹಿಳಾ ಘಟಕದ ಅಧ್ಯಕ್ಷರಾದ ಪ್ರೇಮಾ ಪಾಟೀಲ, ಶಾಸಕರಾದ ಶ್ರೀನಿವಾಸ್ ಮಾನೆ, ಯಾಸೀರ್ ಅಹ್ಮದ್ ಖಾನ್ ಪಠಾಣ, ಮಾಜಿ ಸಂಸದ ಐ.ಜಿ. ಸನದಿ, ಮುಖಂಡರಾದ ಆನಂದಸ್ವಾಮಿ ಗಡ್ಡದ್ದೇವರಮಠ, ಎಸ್.ಎಫ್.ಎನ್ ಗಾಜಿಗೌಡ್ರ ಹಾಗೂ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: ‘</strong>ಮುಂಬರುವ ರಾಜ್ಯದ ಪದವೀಧರರ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ, ಕಾಂಗ್ರೆಸ್ ಪಕ್ಷಕ್ಕೆ ಸತ್ವ ಪರೀಕ್ಷೆ. ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಗೆಲುವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಘಟಕದ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಭೆ’ಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿರುವ ಎಲ್ಲ ಶಾಸಕರು, ನಮ್ಮ ಪಕ್ಷದವರು. ಕ್ರಿಯಾಶೀಲ ಕಾರ್ಯಕರ್ತರೂ ಜಿಲ್ಲೆಯಲ್ಲಿದ್ದಾರೆ. ಯಾವುದೇ ಭಿನ್ನಾಭಿಪ್ರಾಯವಿದ್ದರೂ ಬದಿಗಿಟ್ಟು ಪಕ್ಷದ ಗೆಲುವಿಗೆ ಶ್ರಮಿಸಬೇಕು’ ಎಂದರು.</p>.<p>ಕೆಪಿಸಿಸಿ ರಾಜ್ಯ ಉಸ್ತುವಾರಿ ಮಯೂರ ಜಯಕುಮಾರ ಮಾತನಾಡಿ, ‘ಪದವೀಧರ ಪಶ್ಚಿಮ ಮತಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ನಾಲ್ಕು ಜಿಲ್ಲೆಯ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಜೊತೆಗೆ, ನೂತನ ಮತದಾರರ ನೋಂದಣಿ ಮಾಡಿಸಬೇಕು’ ಎಂದರು.</p>.<p>ಅಭ್ಯರ್ಥಿ ಮೋಹನ ಲಿಂಬಿಕಾಯಿ ಮಾತನಾಡಿ, ‘ಪದವೀಧರರ ಮತದಾನಕ್ಕೆ ಸದಸ್ಯತ್ವ ನೋಂದಣಿಗೆ ಇನ್ನೂ ಸಮಯಾವಕಾಶವಿದೆ. ಈಗಾಗಲೇ ಸದಸ್ಯತ್ವ ಪಡೆದವರು ತಾಂತ್ರಿಕ ತೊಂದರೆ ಅನುಭವಿಸುತ್ತಿರುವ ಕಾರಣಕ್ಕೆ ಸಹಾಯವಾಣಿ ತೆರೆಯಲಾಗಿದೆ. ತಳಮಟ್ಟದಲ್ಲಿ ಪದವೀಧರರನ್ನು ಗುರುತಿಸಿ ಸದಸ್ಯತ್ವ ನೋಂದಣಿ ಮಾಡಿಸಬೇಕು’ ಎಂದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮಹಿಳಾ ಘಟಕದ ಅಧ್ಯಕ್ಷರಾದ ಪ್ರೇಮಾ ಪಾಟೀಲ, ಶಾಸಕರಾದ ಶ್ರೀನಿವಾಸ್ ಮಾನೆ, ಯಾಸೀರ್ ಅಹ್ಮದ್ ಖಾನ್ ಪಠಾಣ, ಮಾಜಿ ಸಂಸದ ಐ.ಜಿ. ಸನದಿ, ಮುಖಂಡರಾದ ಆನಂದಸ್ವಾಮಿ ಗಡ್ಡದ್ದೇವರಮಠ, ಎಸ್.ಎಫ್.ಎನ್ ಗಾಜಿಗೌಡ್ರ ಹಾಗೂ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>