ಸಚಿವ ಮುನಿರತ್ನ ಮಾಧ್ಯಮದವರೊಂದಿಗೆ ಮಾತನಾಡಿ,ನರೇಂದ್ರ ಮೋದಿ ರೇಷನ್ ಅಂಗಡಿಗೆ ಹೋಗಿ ಅನುಭವ ಇದೆಯಾ? ಎಂಬ ಕಾಂಗ್ರೆಸ್ ವರಿಷ್ಠ ರಣದೀಪ್ ಸುರ್ಜೆವಾಲಾ ಕೇಳುತ್ತಾರೆ. ಮೋದಿ ಚಿನ್ನದ ಚಮಚವನ್ನು ಬಾಯಲ್ಲಿ ಇಟ್ಟುಕೊಂಡು ಹುಟ್ಟಿದವರಲ್ಲ. ಬಡಕುಟುಂಬದಲ್ಲಿ ಹುಟ್ಟಿದ ಅವರು ಸೊಸೈಟಿಯಲ್ಲಿ ಸರದಿ ಸಾಲಿನಲ್ಲಿ ನಿಂತು ಅಕ್ಕಿ ತೆಗೆದುಕೊಂಡು ಬಂದಿದ್ದಾರೆ ಎಂದು ತಿರುಗೇಟು ನೀಡಿದರು.