<p><strong>ಹಾವೇರಿ:</strong>ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ನೂರಕ್ಕೆ ನೂರರಷ್ಟು ಹೊಂದಾಣಿಕೆ ಇಲ್ಲ. ಆದರೆ, ಬಿಜೆಪಿ ಸಚಿವರಲ್ಲಿ ಯಾವುದೇ ವೈಮನಸ್ಯ ಇಲ್ಲ. ಎಲ್ಲರೂ ಒಟ್ಟಾಗಿದ್ದು, ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಬ್ಯಾಡಗಿ ಎಪಿಎಂಸಿ ಸಭಾಂಗಣದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ‘ಲೆಕ್ಕ ಕೊಡಿ’ ಎಂದು ವಿರೋಧ ಪಕ್ಷದವರು ಕೇಳುತ್ತಿದ್ದಾರೆ. ‘ಲೆಕ್ಕ ತೆಗೆದುಕೊಳ್ಳಿ’ ಅಂತ ನಾವೂ ಹೇಳುತ್ತಿದ್ದೇವಲ್ಲ ಎಂದು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು.</p>.<p>ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದು, ಅಧಿಕಾರಿಗಳ ಸಭೆ ನಡೆಸಿ ಲೆಕ್ಕ ತೆಗೆದುಕೊಳ್ಳಬಹುದು. ಆದರೆ, ಅವರಿಗೆ ಆರೋಪದಲ್ಲಿ ಇರುವ ಆಸಕ್ತಿ, ಲೆಕ್ಕ ನೋಡುವುದರಲ್ಲಿ ಇಲ್ಲ.ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ₹2,300 ಕೋಟಿ ಭ್ರಷ್ಟಾಚಾರ ಮಾಡಿದೆ ಎಂದು ಆರೋಪಿಸುತ್ತಾರೆ. ಆದರೆ, ಸರ್ಕಾರ 4 ತಿಂಗಳಲ್ಲಿ ಖರ್ಚು ಮಾಡಿರುವುದೇ ₹560 ಕೋಟಿ ಎಂದು ಹೇಳಿದರು.</p>.<p>ರಾಜೀನಾಮೆ ಕೊಟ್ಟು, ಬಿಜೆಪಿ ಸೇರ್ಪಡೆಯಾದವರಿಗೆ ಸಚಿವ ಸ್ಥಾನ ಕೊಡುವುದು ಮತ್ತು ಸಚಿವ ಸ್ಥಾನದಿಂದ ಕಳೆಗಿಳಿಸುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಎಲ್ಲರಿಗೂ ನ್ಯಾಯ ಕೊಡುವ ಕೆಲಸವನ್ನು ಸಿ.ಎಂ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong>ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ನೂರಕ್ಕೆ ನೂರರಷ್ಟು ಹೊಂದಾಣಿಕೆ ಇಲ್ಲ. ಆದರೆ, ಬಿಜೆಪಿ ಸಚಿವರಲ್ಲಿ ಯಾವುದೇ ವೈಮನಸ್ಯ ಇಲ್ಲ. ಎಲ್ಲರೂ ಒಟ್ಟಾಗಿದ್ದು, ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಬ್ಯಾಡಗಿ ಎಪಿಎಂಸಿ ಸಭಾಂಗಣದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ‘ಲೆಕ್ಕ ಕೊಡಿ’ ಎಂದು ವಿರೋಧ ಪಕ್ಷದವರು ಕೇಳುತ್ತಿದ್ದಾರೆ. ‘ಲೆಕ್ಕ ತೆಗೆದುಕೊಳ್ಳಿ’ ಅಂತ ನಾವೂ ಹೇಳುತ್ತಿದ್ದೇವಲ್ಲ ಎಂದು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು.</p>.<p>ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದು, ಅಧಿಕಾರಿಗಳ ಸಭೆ ನಡೆಸಿ ಲೆಕ್ಕ ತೆಗೆದುಕೊಳ್ಳಬಹುದು. ಆದರೆ, ಅವರಿಗೆ ಆರೋಪದಲ್ಲಿ ಇರುವ ಆಸಕ್ತಿ, ಲೆಕ್ಕ ನೋಡುವುದರಲ್ಲಿ ಇಲ್ಲ.ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ₹2,300 ಕೋಟಿ ಭ್ರಷ್ಟಾಚಾರ ಮಾಡಿದೆ ಎಂದು ಆರೋಪಿಸುತ್ತಾರೆ. ಆದರೆ, ಸರ್ಕಾರ 4 ತಿಂಗಳಲ್ಲಿ ಖರ್ಚು ಮಾಡಿರುವುದೇ ₹560 ಕೋಟಿ ಎಂದು ಹೇಳಿದರು.</p>.<p>ರಾಜೀನಾಮೆ ಕೊಟ್ಟು, ಬಿಜೆಪಿ ಸೇರ್ಪಡೆಯಾದವರಿಗೆ ಸಚಿವ ಸ್ಥಾನ ಕೊಡುವುದು ಮತ್ತು ಸಚಿವ ಸ್ಥಾನದಿಂದ ಕಳೆಗಿಳಿಸುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಎಲ್ಲರಿಗೂ ನ್ಯಾಯ ಕೊಡುವ ಕೆಲಸವನ್ನು ಸಿ.ಎಂ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>