<p><strong>ರಟ್ಟೀಹಳ್ಳಿ</strong>: ತಾಲ್ಲೂಕಿನ ಕಣವಿಶಿದ್ಗೇರಿ ಗ್ರಾಮದಲ್ಲಿ ಚಿರತೆ ಸೆರೆಗಾಗಿ ತಿಂಗಳಿಂದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪ್ರಯತ್ನ ಮುಂದುವರೆದಿದ್ದು, ಇದುವರೆಗೂ ಚಿರತೆ ಸೆರೆಯಾಗದಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.</p>.<p>ಕಣವಿಶಿದ್ಗೇರಿ ಗ್ರಾಮದಲ್ಲಿ ಅ.11 ರಂದು ಚಿರತೆ ದಾಳಿಯಲ್ಲಿ ರೈತ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಜಿಲ್ಲೆಯ 30ಕ್ಕೂ ಅಧಿಕ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗಾಗಿ ನಿರಂತರ ಪ್ರಯತ್ನ ಮುಂದುವರೆಸಿದ್ದು ಚಿರತೆ ಇರುವಿಕೆಯನ್ನು ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.</p>.<p>ಕಣವಿಶಿದ್ಗೇರಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪರ್ವತ ಶಿದ್ಗೇರಿ, ಜೋಕನಾಳ, ಚಪ್ಪರದಹಳ್ಳಿ, ಹಿರೇಮೊರಬ ಗ್ರಾಮಗಳ ಜಮೀನುಗಳಲ್ಲಿ ಚಿರತೆ ಹೆಜ್ಜೆ ಗುರುತುಗಳು ಪತ್ತೆಯಾಗುತ್ತಿದ್ದು, ಸುತ್ತಮುತ್ತಲಿನ ಎಲ್ಲ ಗ್ರಾಮಗಳ ರೈತರಲ್ಲಿ ಆತಂಕ ಮನೆಮಾಡಿದೆ.</p>.<p>ಕಳೆದ ಎರಡು ದಿನಗಳ ಹಿಂದೆ ಚಪ್ಪರದಹಳ್ಳಿ, ಹಿರೇಮೊರಬ ಗ್ರಾಮಗಳಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿ ವಿಜಯಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಸದ್ಯದಲ್ಲಿಯೇ ಬೆಂಗಳೂರು ಮತ್ತು ತುಮಕೂರುಗಳಿಂದ ಚಿರತೆ ಸೆರೆಗಾಗಿ ವಿಶೇಷ ತರಬೇತಿ ತಂಡ ಕಳಿಸುವಂತೆ ಕೋರಿದ್ದೇವೆ. ನುರಿತ ತಂಡದಿಂದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆಸುತ್ತೇವೆ ಎಂದು ಅರಣ್ಯಾಧಿಕಾರಿ ವಿಜಯಕುಮಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ</strong>: ತಾಲ್ಲೂಕಿನ ಕಣವಿಶಿದ್ಗೇರಿ ಗ್ರಾಮದಲ್ಲಿ ಚಿರತೆ ಸೆರೆಗಾಗಿ ತಿಂಗಳಿಂದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪ್ರಯತ್ನ ಮುಂದುವರೆದಿದ್ದು, ಇದುವರೆಗೂ ಚಿರತೆ ಸೆರೆಯಾಗದಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.</p>.<p>ಕಣವಿಶಿದ್ಗೇರಿ ಗ್ರಾಮದಲ್ಲಿ ಅ.11 ರಂದು ಚಿರತೆ ದಾಳಿಯಲ್ಲಿ ರೈತ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಜಿಲ್ಲೆಯ 30ಕ್ಕೂ ಅಧಿಕ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗಾಗಿ ನಿರಂತರ ಪ್ರಯತ್ನ ಮುಂದುವರೆಸಿದ್ದು ಚಿರತೆ ಇರುವಿಕೆಯನ್ನು ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.</p>.<p>ಕಣವಿಶಿದ್ಗೇರಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪರ್ವತ ಶಿದ್ಗೇರಿ, ಜೋಕನಾಳ, ಚಪ್ಪರದಹಳ್ಳಿ, ಹಿರೇಮೊರಬ ಗ್ರಾಮಗಳ ಜಮೀನುಗಳಲ್ಲಿ ಚಿರತೆ ಹೆಜ್ಜೆ ಗುರುತುಗಳು ಪತ್ತೆಯಾಗುತ್ತಿದ್ದು, ಸುತ್ತಮುತ್ತಲಿನ ಎಲ್ಲ ಗ್ರಾಮಗಳ ರೈತರಲ್ಲಿ ಆತಂಕ ಮನೆಮಾಡಿದೆ.</p>.<p>ಕಳೆದ ಎರಡು ದಿನಗಳ ಹಿಂದೆ ಚಪ್ಪರದಹಳ್ಳಿ, ಹಿರೇಮೊರಬ ಗ್ರಾಮಗಳಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿ ವಿಜಯಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಸದ್ಯದಲ್ಲಿಯೇ ಬೆಂಗಳೂರು ಮತ್ತು ತುಮಕೂರುಗಳಿಂದ ಚಿರತೆ ಸೆರೆಗಾಗಿ ವಿಶೇಷ ತರಬೇತಿ ತಂಡ ಕಳಿಸುವಂತೆ ಕೋರಿದ್ದೇವೆ. ನುರಿತ ತಂಡದಿಂದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆಸುತ್ತೇವೆ ಎಂದು ಅರಣ್ಯಾಧಿಕಾರಿ ವಿಜಯಕುಮಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>