<p><strong>ಹಾವೇರಿ</strong>: ‘ಕೊರೊನಾ ಸಂಕಷ್ಟ ಕಾಲದಲ್ಲಿ ಸರ್ಕಾರ ಕುರಿಗಾರರ ನೆರವಿಗೆ ಬಂದಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಹಣ ಬಿಡುಗಡೆಯಾಗಿದ್ದು, ಆರ್.ಟಿ.ಜಿ.ಎಸ್ ಮೂಲಕ ಸಂದಾಯ ಮಾಡಲಾಗುವುದು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.</p>.<p>ನಗರದ ಪಶು ಆಸ್ಪತ್ರೆಯಲ್ಲಿ ಬುಧವಾರ ಹಾವೇರಿ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಕುರಿಗಾರರಿಗೆ 2018-19 ಮತ್ತು 2019-20ನೇ ಸಾಲಿನ ಸತ್ತ ಕುರಿಗಳ ಮಾಲೀಕರಿಗೆ ಪರಿಹಾರ ಧನ ವಿತರಿಸಿ ಅವರು ಮಾತನಾಡಿದರು.</p>.<p>ಸರ್ಕಾರವು ರೈತರಿಗೆ ಮತ್ತು ಕುರಿಗಾರರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮತ್ತು ಕುರಿ ಹಾಗೂ ಮೇಕೆಗಳ ಸಲುವಾಗಿ ಅತ್ಯಾಧುನಿಕ (ಪಾಲಿಕ್ಲಿನಿಕ್) ಆಸ್ಪತ್ರೆಯನ್ನು ಹಾವೇರಿಯಲ್ಲಿ ಆರಂಭಿಸಲಾಗಿದೆ. ಎಲ್ಲಾ ರೈತ ಭಾಂದವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಸಹಾಯಕ ನಿರ್ದೇಶಕ ಡಾ.ಬಸವರಾಜ ಡಿ.ಸಿ ಅವರು ಇಲಾಖೆ ಮತ್ತು ಕುರಿ ಉಣ್ಣೆ ಅಭಿವೃದ್ದಿ ನಿಗಮದ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು. ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮುಖ್ಯ ಪಶುವೈದ್ಯಾಧಿಕಾರಿ ಡಾ.ಎಚ್.ಸಿ.ಪಾಟೀಲ ಸ್ವಾಗತಿಸಿದರು.</p>.<p>ಪ್ರಭಾರ ಉಪನಿರ್ದೇಶಕ ಡಾ.ಎಚ್.ಬಿ.ಸಣ್ಣಕ್ಕಿ (ಪಾಲಿಕ್ಲಿನಿಕ್) ಕಂದು ರೋಗದ ಬಗ್ಗೆ ಮಾಹಿತಿ ನೀಡಿದರು. ಪರಶುರಾಮ ಹರಿಜನ, ಹನುಮಂತಪ್ಪ ಕುಮಣ್ಣನವರ, ಶ್ರೀಕಾಂತ ಪೂಜಾರ, ಮುಖ್ಯ ಪಶುವೈದ್ಯಾಧಿಕಾರಿ ಡಾ.ದಿವಾಕರ ನಾಡಗೇರ, ಡಾ.ಗಂಗಾಧರ ಸುಕ್ತೆ, ಡಾ.ವಿಜಯಕುಮಾರ ಹಳಕಟ್ಟಿ, ಜಾನುವಾರು ಅಭಿವೃದ್ಧಿ ಅಧಿಕಾರಿ ಎಸ್.ಎಫ್.ಕರಿಯಪ್ಪನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಕೊರೊನಾ ಸಂಕಷ್ಟ ಕಾಲದಲ್ಲಿ ಸರ್ಕಾರ ಕುರಿಗಾರರ ನೆರವಿಗೆ ಬಂದಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಹಣ ಬಿಡುಗಡೆಯಾಗಿದ್ದು, ಆರ್.ಟಿ.ಜಿ.ಎಸ್ ಮೂಲಕ ಸಂದಾಯ ಮಾಡಲಾಗುವುದು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.</p>.<p>ನಗರದ ಪಶು ಆಸ್ಪತ್ರೆಯಲ್ಲಿ ಬುಧವಾರ ಹಾವೇರಿ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಕುರಿಗಾರರಿಗೆ 2018-19 ಮತ್ತು 2019-20ನೇ ಸಾಲಿನ ಸತ್ತ ಕುರಿಗಳ ಮಾಲೀಕರಿಗೆ ಪರಿಹಾರ ಧನ ವಿತರಿಸಿ ಅವರು ಮಾತನಾಡಿದರು.</p>.<p>ಸರ್ಕಾರವು ರೈತರಿಗೆ ಮತ್ತು ಕುರಿಗಾರರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮತ್ತು ಕುರಿ ಹಾಗೂ ಮೇಕೆಗಳ ಸಲುವಾಗಿ ಅತ್ಯಾಧುನಿಕ (ಪಾಲಿಕ್ಲಿನಿಕ್) ಆಸ್ಪತ್ರೆಯನ್ನು ಹಾವೇರಿಯಲ್ಲಿ ಆರಂಭಿಸಲಾಗಿದೆ. ಎಲ್ಲಾ ರೈತ ಭಾಂದವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಸಹಾಯಕ ನಿರ್ದೇಶಕ ಡಾ.ಬಸವರಾಜ ಡಿ.ಸಿ ಅವರು ಇಲಾಖೆ ಮತ್ತು ಕುರಿ ಉಣ್ಣೆ ಅಭಿವೃದ್ದಿ ನಿಗಮದ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು. ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮುಖ್ಯ ಪಶುವೈದ್ಯಾಧಿಕಾರಿ ಡಾ.ಎಚ್.ಸಿ.ಪಾಟೀಲ ಸ್ವಾಗತಿಸಿದರು.</p>.<p>ಪ್ರಭಾರ ಉಪನಿರ್ದೇಶಕ ಡಾ.ಎಚ್.ಬಿ.ಸಣ್ಣಕ್ಕಿ (ಪಾಲಿಕ್ಲಿನಿಕ್) ಕಂದು ರೋಗದ ಬಗ್ಗೆ ಮಾಹಿತಿ ನೀಡಿದರು. ಪರಶುರಾಮ ಹರಿಜನ, ಹನುಮಂತಪ್ಪ ಕುಮಣ್ಣನವರ, ಶ್ರೀಕಾಂತ ಪೂಜಾರ, ಮುಖ್ಯ ಪಶುವೈದ್ಯಾಧಿಕಾರಿ ಡಾ.ದಿವಾಕರ ನಾಡಗೇರ, ಡಾ.ಗಂಗಾಧರ ಸುಕ್ತೆ, ಡಾ.ವಿಜಯಕುಮಾರ ಹಳಕಟ್ಟಿ, ಜಾನುವಾರು ಅಭಿವೃದ್ಧಿ ಅಧಿಕಾರಿ ಎಸ್.ಎಫ್.ಕರಿಯಪ್ಪನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>