<p><strong>ಹಿರೇಕೆರೂರ</strong>: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ಸಿಬ್ಬಂದ್ದಿ ಸರಿಯಾಗಿ ಸಮಯ ಪಾಲನೆಯೊಂದಿಗೆ ಉತ್ತಮ ಕಾರ್ಯವನ್ನು ನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸಬೇಕು ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಆಸ್ಪತ್ರೆಯಲ್ಲಿ ಎಲ್ಲಾ ಸಿಬ್ಬಂದ್ದಿ ರೋಗಿಗಳನ್ನು ಆತ್ಮೀಯವಾಗಿ ಕಾಣಬೇಕು ಮತ್ತು ಉತ್ತಮವಾದ ಚಿಕಿತ್ಸೆಯನ್ನು ನೀಡಬೇಕು. ಹಾಜರಾತಿಯನ್ನು ಬಯೋಮೆಟ್ರಿಕ್ ಅಲ್ಲಿಯೆ ಹಾಕಬೇಕು, ಸ್ವಚ್ಛತಾ ಸಿಬ್ಬಂದ್ಧಿ ಸೇರಿದಂತೆ ಎಲ್ಲಾ ಸಿಬ್ಬಂದ್ಧಿಗಳು ಸರಿಯಾಗಿ ಕಾರ್ಯವನ್ನು ಹಂಚಿಕೆ ಮಾಡಿಕೊಂಡು ಕೆಲಸವನ್ನು ನಿರ್ವಹಿಸಬೇಕು ಎಂದರು.</p>.<p>ರೋಗಿಗಳಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು. ಶೌಚಾಲಯ ಮತ್ತು ಆಸ್ಪತ್ರೆಯ ಸ್ವಚ್ಛತೆಯನ್ನು ಕಾಡಬೇಕು. ಆಸ್ಪತ್ರೆಯಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಕೆಲಸದಲ್ಲಿ ಸುಧಾರಣೆ ಮಾಡಬೇಕು ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಝೆಡ್. ಆರ್. ಮಕಾನದರ , ಆಡಳಿತ ವೈದ್ಯಾಧಿಕಾರಿ ಹ್ಯಾಡರ ಮಲ್ಲಪ್ಪ , ವೈದ್ಯರಾದ ಡಾ.ಮಹಾಂತೇಶ , ಡಾ. ಮಂಜುನಾಥ ಮತ್ತು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ</strong>: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ಸಿಬ್ಬಂದ್ದಿ ಸರಿಯಾಗಿ ಸಮಯ ಪಾಲನೆಯೊಂದಿಗೆ ಉತ್ತಮ ಕಾರ್ಯವನ್ನು ನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸಬೇಕು ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಆಸ್ಪತ್ರೆಯಲ್ಲಿ ಎಲ್ಲಾ ಸಿಬ್ಬಂದ್ದಿ ರೋಗಿಗಳನ್ನು ಆತ್ಮೀಯವಾಗಿ ಕಾಣಬೇಕು ಮತ್ತು ಉತ್ತಮವಾದ ಚಿಕಿತ್ಸೆಯನ್ನು ನೀಡಬೇಕು. ಹಾಜರಾತಿಯನ್ನು ಬಯೋಮೆಟ್ರಿಕ್ ಅಲ್ಲಿಯೆ ಹಾಕಬೇಕು, ಸ್ವಚ್ಛತಾ ಸಿಬ್ಬಂದ್ಧಿ ಸೇರಿದಂತೆ ಎಲ್ಲಾ ಸಿಬ್ಬಂದ್ಧಿಗಳು ಸರಿಯಾಗಿ ಕಾರ್ಯವನ್ನು ಹಂಚಿಕೆ ಮಾಡಿಕೊಂಡು ಕೆಲಸವನ್ನು ನಿರ್ವಹಿಸಬೇಕು ಎಂದರು.</p>.<p>ರೋಗಿಗಳಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು. ಶೌಚಾಲಯ ಮತ್ತು ಆಸ್ಪತ್ರೆಯ ಸ್ವಚ್ಛತೆಯನ್ನು ಕಾಡಬೇಕು. ಆಸ್ಪತ್ರೆಯಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಕೆಲಸದಲ್ಲಿ ಸುಧಾರಣೆ ಮಾಡಬೇಕು ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಝೆಡ್. ಆರ್. ಮಕಾನದರ , ಆಡಳಿತ ವೈದ್ಯಾಧಿಕಾರಿ ಹ್ಯಾಡರ ಮಲ್ಲಪ್ಪ , ವೈದ್ಯರಾದ ಡಾ.ಮಹಾಂತೇಶ , ಡಾ. ಮಂಜುನಾಥ ಮತ್ತು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>