ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲು ಒತ್ತಾಯ

Last Updated 27 ಅಕ್ಟೋಬರ್ 2021, 4:43 IST
ಅಕ್ಷರ ಗಾತ್ರ

ಹಾನಗಲ್: ಜನಹಿತ ರಕ್ಷಣಾ ವೇದಿಕೆ ಸಂಸಾಪಕ ಅಧ್ಯಕ್ಷ ಬಿ.ಕೆ.ಮೋಹನಕುಮಾರ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳದೇ ಅಪಮಾನ ಮಾಡಲಾಗಿದೆ ಎಂದು ಅವರ ಅಭಿಮಾನಿಗಳು ಮಂಗಳವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿದರು.

ಕ್ರೀಡೆ, ಧಾರ್ಮಿಕ, ಸಾಂಸ್ಕೃತಿ ವಿಷಯವಾಗಿ ಹಾನಗಲ್‌ ಕ್ಷೇತ್ರದಲ್ಲಿ ಕ್ರೀಯಾಶೀಲರಾದ ಮೋಹನಕುಮಾರ ಅವರಿಗೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ. ಇದು ಚುನಾವಣಾ ಸಮಯದಲ್ಲಿ ಅವರು ಕಾಂಗ್ರೆಸ್‌ ಬೆಂಬಲಿಸಿ ಪಕ್ಷ ಸೇರ್ಪಡೆಗೆ ಸಿದ್ಧರಾಗಿದ್ದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಇದಕ್ಕೆ ಅವಕಾಶ ಕೊಡಲಿಲ್ಲ ಎಂದು ಈ ಸಂದರ್ಭದಲ್ಲಿ ನಾಗೇಂದ್ರಪ್ಪ ತುಮರಿಕೊಪ್ಪ ಹೇಳಿದರು.

ರಕ್ಷಣಾ ವೇದಿಕೆ ಕಾರ್ಯದರ್ಶಿ ಸುಭಾಸ ಗಡ್ಡದ ಮಾತನಾಡಿ, ಯಾವ ಕಾರಣಕ್ಕಾಗಿ ಬಿ.ಕೆ.ಮೋಹನಕುಮಾರ ಅವರಿಗೆ ಕಾಂಗ್ರೆಸ್ ಬಾಗಿಲು ತೆರೆಯುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ನಮ್ಮದು ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟವಲ್ಲ. ಮೋಹನಕುಮಾರ ಅವರಿಗೆ ಗೌರವ ನೀಡಬೇಕು ಎಂದು ಆಗ್ರಹಿಸಿದರು. ರವಿ ನಿಂಬಕ್ಕನವರ, ಭೀಮಣ್ಣ ಬಾರ್ಕಿ, ಹೊನ್ನಪ್ಪ ಬಾಸೂರ, ಫಕ್ಕೀರೇಶ ಕರೆಣ್ಣನವರ, ಕೃಷ್ಣ ಮರಡಿ, ಬಸವರಾಜ ಮಲ್ನಾಡದ, ಸುರೇಶ ಜಾಡರ, ಶಂಕರ ಗಾಜಿ ಮತ್ತು ಮಹಿಳಾ ಅಭಿಮಾನಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT