ಬೆಂಕಿ ಉರಿಯುತ್ತಿರುವುದನ್ನು ನೋಡಿದ ಸ್ಥಳೀಯರು ನೀಡಿದಮಾಹಿತಿ ಮೇರೆಗೆ,ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆ ವೇಳೆಗಾಗಲೇ ಬಹಳಷ್ಟು ಮಳಿಗೆಗಳಲ್ಲಿದ್ದ ಪದಾರ್ಥಗಳು ಸುಟ್ಟು ಕರಕಲಾಗಿದ್ದವು. ತಮ್ಮ ಅಂಗಡಿಗಳ ಮುಂದೆ ವ್ಯಾಪಾರಿಗಳ ರೋದನ ಮುಗಿಲು ಮುಟ್ಟಿತ್ತು.