<p><strong>ಬ್ಯಾಡಗಿ:</strong> ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಹೀಗಾಗಿ ರಕ್ತವನ್ನು ಮನುಷ್ಯರಿಂದ ಸಂಗ್ರಹಿಸಬೇಕಾಗಿದ್ದು, ಆರೋಗ್ಯವಂತ ಯುವಕರು ರಕ್ತದಾನ ಮಾಡಲು ಮುಂದಾಗುವಂತೆ ಬಿಆರ್ಇ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.</p>.<p>ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಾವೇರಿ ವಿಶ್ವವಿದ್ಯಾಲಯದ ಎನ್ಎಸ್ಎಸ್ ಕೋಶ, ಔಷಧೀಯ ಮಹಾವಿದ್ಯಾಲಯ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ರಕ್ತ ನಿಧಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಇದರಿಂದ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು. ಜೊತೆಗೆ ರೋಗ ನಿರೋಧಕ ಶಕ್ತಿ ಕೂಡಾ ಹೆಚ್ಚಲಿದೆ ಎಂದರು.</p>.<p>ಹೆಚ್ಚಿನ ಮಹಿಳಾ ಪ್ರಶಿಕ್ಷಣಾರ್ಥಿಗಳು ರಕ್ತದಾನ ಮಾಡಿರುವುದು ಜಿಲ್ಲೆಯಲ್ಲಿ ಅತಿ ಹೆಚ್ಚು ಎನ್ನಲಾಗಿದೆ. ಒಟ್ಟಾರೆ 32 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಪ್ರಾಚಾರ್ಯ ಎಂ.ಸುರೇಶ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಷಣ್ಮುಖಪ್ಪ ಬಳ್ಳಾರಿ, ಖಜಾಂಚಿ ಚನ್ನವೀರಪ್ಪ ಬಳ್ಳಾರಿ, ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಬಸವರಾಜ ಕಮತದ, ಡಾ. ರೇಣುಕಾರಾಧ್ಯ ಚಿಟ್ಟಿ, ತಾಂತ್ರಿಕ ಅಧಿಕಾರಿ ಶಶಿಕುಮಾರ ಶಿಮೊಗ್ಗಿ, ಸಿದ್ದು ಹಿರಗಣ್ಣನವರ, ಈರಣ್ಣ ಆರ್.ಸಿ ಹಾಗೂ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಹೀಗಾಗಿ ರಕ್ತವನ್ನು ಮನುಷ್ಯರಿಂದ ಸಂಗ್ರಹಿಸಬೇಕಾಗಿದ್ದು, ಆರೋಗ್ಯವಂತ ಯುವಕರು ರಕ್ತದಾನ ಮಾಡಲು ಮುಂದಾಗುವಂತೆ ಬಿಆರ್ಇ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.</p>.<p>ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಾವೇರಿ ವಿಶ್ವವಿದ್ಯಾಲಯದ ಎನ್ಎಸ್ಎಸ್ ಕೋಶ, ಔಷಧೀಯ ಮಹಾವಿದ್ಯಾಲಯ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ರಕ್ತ ನಿಧಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಇದರಿಂದ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು. ಜೊತೆಗೆ ರೋಗ ನಿರೋಧಕ ಶಕ್ತಿ ಕೂಡಾ ಹೆಚ್ಚಲಿದೆ ಎಂದರು.</p>.<p>ಹೆಚ್ಚಿನ ಮಹಿಳಾ ಪ್ರಶಿಕ್ಷಣಾರ್ಥಿಗಳು ರಕ್ತದಾನ ಮಾಡಿರುವುದು ಜಿಲ್ಲೆಯಲ್ಲಿ ಅತಿ ಹೆಚ್ಚು ಎನ್ನಲಾಗಿದೆ. ಒಟ್ಟಾರೆ 32 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಪ್ರಾಚಾರ್ಯ ಎಂ.ಸುರೇಶ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಷಣ್ಮುಖಪ್ಪ ಬಳ್ಳಾರಿ, ಖಜಾಂಚಿ ಚನ್ನವೀರಪ್ಪ ಬಳ್ಳಾರಿ, ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಬಸವರಾಜ ಕಮತದ, ಡಾ. ರೇಣುಕಾರಾಧ್ಯ ಚಿಟ್ಟಿ, ತಾಂತ್ರಿಕ ಅಧಿಕಾರಿ ಶಶಿಕುಮಾರ ಶಿಮೊಗ್ಗಿ, ಸಿದ್ದು ಹಿರಗಣ್ಣನವರ, ಈರಣ್ಣ ಆರ್.ಸಿ ಹಾಗೂ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>