<p><strong>ಹಾವೇರಿ:</strong> ಪ್ರಧಾನಿ ನರೇಂದ್ರ ಮೋದಿ ಆಡಳಿತದ ಮೇಲಿನ ವಿಶ್ವಾಸ, ಯುವ ಮತದಾರರ ಒಲವು ಹಾಗೂ ಕಾಂಗ್ರೆಸ್ ಬಗೆಗಿನ ಭ್ರಮನಿರಸನವು ಕ್ಷೇತ್ರದಲ್ಲಿ ಸಾಂಪ್ರದಾಯಿಕ ಕಾಂಗ್ರೆಸ್ ಮತದಾರರನ್ನೂ ಬಿಜೆಪಿಯತ್ತ ಸೆಳೆದಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹಣ ಬಲ, ಆಡಳಿತ ಯಂತ್ರ ದುರುಪಯೋಗದ ಮೂಲಕ ಗೆಲ್ಲಲು ಯತ್ನಿಸುತ್ತಿರುವ ಕಾಂಗ್ರೆಸ್ಗೆಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಕಾಂಗ್ರೆಸ್ ಪಾಲಿಗೆ ಮೋದಿ ಸಿಂಹಸ್ವಪ್ನವಾಗಿದ್ದಾರೆ. ಈ ಭಯದಿಂದಾಗಿ ಖುದ್ದು ಸಿದ್ದರಾಮಯ್ಯನವೂ ಭಾಷಣದಲ್ಲಿ ಮೋದಿ, ಮೋದಿ, ಮೋದಿ ಎನ್ನುತ್ತಿದ್ದಾರೆ ಎಂದು ಕುಟುಕಿದ ಬೊಮ್ಮಾಯಿ, ಜನತೆಗೆ ಅಭ್ಯರ್ಥಿಗಳ ಮುಖದಲ್ಲೂ ಮೋದಿ ಕಾಣುತ್ತಿದ್ದಾರೆ ಎಂದರು.</p>.<p>ಅಂದು ಕಾಂಗ್ರೆಸ್ಸಿಗರು ಇಂದಿರಾ ಗಾಂಧಿ ಹೆಸರಿನಲ್ಲಿ ಮತ ಕೇಳಿದ್ದರು. ಆದರೆ, ಈ ಬಾರಿ ರಾಹುಲ್ ಗಾಂಧಿ ಹೆಸರು ಯಾಕೆ ಹೇಳುತ್ತಿಲ್ಲ ಎಂದು ವ್ಯಂಗ್ಯವಾಡಿದ ಅವರು, ಚುನಾವಣೆಗೂ ಮೊದಲೇ ಸೋಲು ಒಪ್ಪಿಕೊಂಡಿರುವ ಕಾಂಗ್ರೆಸ್, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಅವರದ್ದು ಎಣ್ಣೆ–ಸೀಗೆಕಾಯಿ ಸಂಬಂಧವಾಗಿದ್ದು, ಇಬ್ಬರೂ ಸೋಲ್ತಾರೆ. ಬಿಜೆಪಿ 20ಕ್ಕೂ ಹೆಚ್ಚು ಸೀಟು ಗೆಲ್ಲಲಿದೆ ಎಂದರು.</p>.<p>ನಮ್ಮ (ಬಿಜೆಪಿ) ಅಭ್ಯರ್ಥಿಯ ಸಾಧನೆಗಳನ್ನು ಜನತೆಯೇ ಹೇಳುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲೇ ಜನತೆ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿದ್ದರೆ, ಸಮ್ಮಿಶ್ರ ಸರ್ಕಾರವು ಇನ್ನೂ ಟೇಕಾಫ್ ಆಗಿಲ್ಲ ಎಂದರು.</p>.<p>ಸಮ್ಮಿಶ್ರ ಸರ್ಕಾರಕ್ಕೆ ಜನತೆಯ ಬೆಂಬಲ ಹಾಗೂ ನೈತಿಕತೆಯ ನೆಲಗಟ್ಟುಗಳು ಇಲ್ಲ. ಹೀಗಾಗಿ, ಈ ಬಾರಿ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಸುಮಾರು 20 ಶಾಸಕರು ಈಗಾಗಲೇ ಜನಾಭಿಪ್ರಾಯಕ್ಕೆ ಮನ್ನಣೆ ನೀಡಲು ಸಿದ್ಧರಾಗಿದ್ದಾರೆ ಎಂದರು.</p>.<p>ವೀರಶೈವ ಮತ್ತು ಲಿಂಗಾಯತರು ಪ್ರಬುದ್ಧರು. ಅವರು ಕಳೆದ ವರ್ಷವೇ ಕಾಂಗ್ರೆಸ್ಗೆ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅನುಕೂಲ ಸಿಂಧು ರಾಜಕಾರಣ ಮಾಡಿದರೆ, ಮತದಾನದ ಮೂಲಕ ತಕ್ಕ ಶಿಕ್ಷೆ ನೀಡಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಸಜ್ಜನರ, ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಮುಖಂಡರಾದ ಭೋಜರಾಜ ಕರೂದಿ, ಮಂಜುನಾಥ ಕುನ್ನೂರ, ವಿರೂಪಾಕ್ಷಪ್ಪ ಕಡ್ಲಿ, ಸಿದ್ದರಾಜ ಕಲಕೋಟಿ, ಪ್ರಭು ಹಿಟ್ನಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಪ್ರಧಾನಿ ನರೇಂದ್ರ ಮೋದಿ ಆಡಳಿತದ ಮೇಲಿನ ವಿಶ್ವಾಸ, ಯುವ ಮತದಾರರ ಒಲವು ಹಾಗೂ ಕಾಂಗ್ರೆಸ್ ಬಗೆಗಿನ ಭ್ರಮನಿರಸನವು ಕ್ಷೇತ್ರದಲ್ಲಿ ಸಾಂಪ್ರದಾಯಿಕ ಕಾಂಗ್ರೆಸ್ ಮತದಾರರನ್ನೂ ಬಿಜೆಪಿಯತ್ತ ಸೆಳೆದಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹಣ ಬಲ, ಆಡಳಿತ ಯಂತ್ರ ದುರುಪಯೋಗದ ಮೂಲಕ ಗೆಲ್ಲಲು ಯತ್ನಿಸುತ್ತಿರುವ ಕಾಂಗ್ರೆಸ್ಗೆಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಕಾಂಗ್ರೆಸ್ ಪಾಲಿಗೆ ಮೋದಿ ಸಿಂಹಸ್ವಪ್ನವಾಗಿದ್ದಾರೆ. ಈ ಭಯದಿಂದಾಗಿ ಖುದ್ದು ಸಿದ್ದರಾಮಯ್ಯನವೂ ಭಾಷಣದಲ್ಲಿ ಮೋದಿ, ಮೋದಿ, ಮೋದಿ ಎನ್ನುತ್ತಿದ್ದಾರೆ ಎಂದು ಕುಟುಕಿದ ಬೊಮ್ಮಾಯಿ, ಜನತೆಗೆ ಅಭ್ಯರ್ಥಿಗಳ ಮುಖದಲ್ಲೂ ಮೋದಿ ಕಾಣುತ್ತಿದ್ದಾರೆ ಎಂದರು.</p>.<p>ಅಂದು ಕಾಂಗ್ರೆಸ್ಸಿಗರು ಇಂದಿರಾ ಗಾಂಧಿ ಹೆಸರಿನಲ್ಲಿ ಮತ ಕೇಳಿದ್ದರು. ಆದರೆ, ಈ ಬಾರಿ ರಾಹುಲ್ ಗಾಂಧಿ ಹೆಸರು ಯಾಕೆ ಹೇಳುತ್ತಿಲ್ಲ ಎಂದು ವ್ಯಂಗ್ಯವಾಡಿದ ಅವರು, ಚುನಾವಣೆಗೂ ಮೊದಲೇ ಸೋಲು ಒಪ್ಪಿಕೊಂಡಿರುವ ಕಾಂಗ್ರೆಸ್, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಅವರದ್ದು ಎಣ್ಣೆ–ಸೀಗೆಕಾಯಿ ಸಂಬಂಧವಾಗಿದ್ದು, ಇಬ್ಬರೂ ಸೋಲ್ತಾರೆ. ಬಿಜೆಪಿ 20ಕ್ಕೂ ಹೆಚ್ಚು ಸೀಟು ಗೆಲ್ಲಲಿದೆ ಎಂದರು.</p>.<p>ನಮ್ಮ (ಬಿಜೆಪಿ) ಅಭ್ಯರ್ಥಿಯ ಸಾಧನೆಗಳನ್ನು ಜನತೆಯೇ ಹೇಳುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲೇ ಜನತೆ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿದ್ದರೆ, ಸಮ್ಮಿಶ್ರ ಸರ್ಕಾರವು ಇನ್ನೂ ಟೇಕಾಫ್ ಆಗಿಲ್ಲ ಎಂದರು.</p>.<p>ಸಮ್ಮಿಶ್ರ ಸರ್ಕಾರಕ್ಕೆ ಜನತೆಯ ಬೆಂಬಲ ಹಾಗೂ ನೈತಿಕತೆಯ ನೆಲಗಟ್ಟುಗಳು ಇಲ್ಲ. ಹೀಗಾಗಿ, ಈ ಬಾರಿ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಸುಮಾರು 20 ಶಾಸಕರು ಈಗಾಗಲೇ ಜನಾಭಿಪ್ರಾಯಕ್ಕೆ ಮನ್ನಣೆ ನೀಡಲು ಸಿದ್ಧರಾಗಿದ್ದಾರೆ ಎಂದರು.</p>.<p>ವೀರಶೈವ ಮತ್ತು ಲಿಂಗಾಯತರು ಪ್ರಬುದ್ಧರು. ಅವರು ಕಳೆದ ವರ್ಷವೇ ಕಾಂಗ್ರೆಸ್ಗೆ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅನುಕೂಲ ಸಿಂಧು ರಾಜಕಾರಣ ಮಾಡಿದರೆ, ಮತದಾನದ ಮೂಲಕ ತಕ್ಕ ಶಿಕ್ಷೆ ನೀಡಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಸಜ್ಜನರ, ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಮುಖಂಡರಾದ ಭೋಜರಾಜ ಕರೂದಿ, ಮಂಜುನಾಥ ಕುನ್ನೂರ, ವಿರೂಪಾಕ್ಷಪ್ಪ ಕಡ್ಲಿ, ಸಿದ್ದರಾಜ ಕಲಕೋಟಿ, ಪ್ರಭು ಹಿಟ್ನಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>