<p><strong>ಹಾನಗಲ್</strong>: ‘ಮುಸ್ಲಿಮರು ಕೇವಲ ವೋಟ್ ಬ್ಯಾಂಕ್ ಅಲ್ಲ. ಅವರೂ ನಮ್ಮಂತೆ ಮನುಷ್ಯರು ಎಂಬುದನ್ನು ಕಾಂಗ್ರೆಸ್ ಅರಿತುಕೊಳ್ಳಬೇಕು. 70 ವರ್ಷಗಳಿಂದ ಅಲ್ಪಸಂಖ್ಯಾತರನ್ನು ‘ವೋಟ್ ಬ್ಯಾಂಕ್’ ಮಾಡಿಕೊಂಡ ಕಾಂಗ್ರೆಸ್ ನಡವಳಿಕೆ ಬದಲಾಗಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.</p>.<p>ಪಟ್ಟಣದಲ್ಲಿ ಶನಿವಾರ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಪರ ಪ್ರಚಾರ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಈ ಚುನಾವಣೆ ಮೂಲಕ ಸರ್ಕಾರ ದಾರಿ ತಪ್ಪುತ್ತಿರುವ ಬಗ್ಗೆ ಮತದಾರರು ಸಂದೇಶ ನೀಡಬಹುದು. ಈ ಬೈ ಎಲೆಕ್ಷನ್ ನನ್ನ ಗುರಿ ಅಲ್ಲ. ಈ ಚುನಾವಣೆ ಫಲಿತಾಂಶದ ಮೇಲೆ 2023ಕ್ಕೆ ‘ಮಿಷನ್ 123’ಗೆ ಪ್ರೋತ್ಸಾಹ ಸಿಗಬಹುದು. ಈ ಬೈ ಎಲೆಕ್ಷನ್ ನಮ್ಮ ‘ಮಿಷನ್ ಟೆಸ್ಟಿಂಗ್’ ಚುನಾವಣೆ ಎಂದರು.</p>.<p>ಹಣದ ಚೀಲದ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ಬಗ್ಗೆ ಅನುಭವವಿದೆ. ಅಧಿಕಾರ ನಡೆಸಬೇಕಾದರೆ ಹಣದ ಚೀಲ ಹೇಗೆ ತರಬೇಕು ಎಂಬುದು ಅವರಿಗೆ ಗೊತ್ತಿದೆ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಇಲ್ಲಿ ಯಾರೂ ಸತ್ಯಹರಿಶ್ಚಂದ್ರ ಇಲ್ಲ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ‘ಮುಸ್ಲಿಮರು ಕೇವಲ ವೋಟ್ ಬ್ಯಾಂಕ್ ಅಲ್ಲ. ಅವರೂ ನಮ್ಮಂತೆ ಮನುಷ್ಯರು ಎಂಬುದನ್ನು ಕಾಂಗ್ರೆಸ್ ಅರಿತುಕೊಳ್ಳಬೇಕು. 70 ವರ್ಷಗಳಿಂದ ಅಲ್ಪಸಂಖ್ಯಾತರನ್ನು ‘ವೋಟ್ ಬ್ಯಾಂಕ್’ ಮಾಡಿಕೊಂಡ ಕಾಂಗ್ರೆಸ್ ನಡವಳಿಕೆ ಬದಲಾಗಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.</p>.<p>ಪಟ್ಟಣದಲ್ಲಿ ಶನಿವಾರ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಪರ ಪ್ರಚಾರ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಈ ಚುನಾವಣೆ ಮೂಲಕ ಸರ್ಕಾರ ದಾರಿ ತಪ್ಪುತ್ತಿರುವ ಬಗ್ಗೆ ಮತದಾರರು ಸಂದೇಶ ನೀಡಬಹುದು. ಈ ಬೈ ಎಲೆಕ್ಷನ್ ನನ್ನ ಗುರಿ ಅಲ್ಲ. ಈ ಚುನಾವಣೆ ಫಲಿತಾಂಶದ ಮೇಲೆ 2023ಕ್ಕೆ ‘ಮಿಷನ್ 123’ಗೆ ಪ್ರೋತ್ಸಾಹ ಸಿಗಬಹುದು. ಈ ಬೈ ಎಲೆಕ್ಷನ್ ನಮ್ಮ ‘ಮಿಷನ್ ಟೆಸ್ಟಿಂಗ್’ ಚುನಾವಣೆ ಎಂದರು.</p>.<p>ಹಣದ ಚೀಲದ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ಬಗ್ಗೆ ಅನುಭವವಿದೆ. ಅಧಿಕಾರ ನಡೆಸಬೇಕಾದರೆ ಹಣದ ಚೀಲ ಹೇಗೆ ತರಬೇಕು ಎಂಬುದು ಅವರಿಗೆ ಗೊತ್ತಿದೆ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಇಲ್ಲಿ ಯಾರೂ ಸತ್ಯಹರಿಶ್ಚಂದ್ರ ಇಲ್ಲ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>