ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರೇಡ್–2 ತಹಶೀಲ್ದಾರ್ ಗವಿಸಿದ್ದಪ್ಪ ದ್ಯಾಮಣ್ಣವರ, ಕಳೆದ ವಾರ ಗ್ರಾಮದಲ್ಲಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದರು. ಹೀಗಾಗಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆಗಾಗಿ ಕೋವಿಡ್ ಪರೀಕ್ಷೆ ನಡೆಸಲು ನಮ್ಮ ತಂಡ ಗ್ರಾಮಕ್ಕೆ ತೆರಳಿತ್ತು. ಗ್ರಾಮಸ್ಥರ ಮನೆ ಬಾಗಿಲಿಗೆ ತೆರಳಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಮಾಡಿದ ಮನವಿಗೆ ಸ್ಪಂದಿಸಲಿಲ್ಲ. ಹೀಗಾಗಿ ಜೂನ್ 4ರಂದು ಕಂಟೈನ್ಮೆಂಟ್ ವಲಯವೆಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶದಂತೆ ಗ್ರಾಮವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿತ್ತು’ ಎಂದರು.