ಗ್ರಾಮದಲ್ಲಿ ಶುಕ್ರವಾರ ಕೋವಿಡ್ ತಪಾಸಣಾ ತಂಡ ತೆರಳಿದ್ದು, ಆರೋಗ್ಯ, ಕಂದಾಯ ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ ಮನೆಗೆ ಮನೆಗೆ ತೆರಳಿ ಕೋವಿಡ್ ತಪಾಸಣೆ ಮಾಡಿಕೊಳ್ಳುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ ಯಾರೂ ತಪಾಸಣೆಗೆ ಒಳಗಾಗಲಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ಗ್ರಾಮವನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿ ಜನರು ಗ್ರಾಮವನ್ನು ತೊರೆಯದಂತೆ ಹಾಗೂ ಗ್ರಾಮಕ್ಕೆ ಬರುವುದನ್ನು ಸ್ಥಗಿತಗೊಳಿಸಲಾಗಿದೆ.