<p><strong>ತಿಳವಳ್ಳಿ</strong>: ‘ಜನಪದ ಕಲೆ, ರಂಗಭೂಮಿ, ಜಾನಪದ ಗೀತೆಗಳು, ಕಲಾ ನೃತ್ಯಗಳು, ಸೋಬಾನೆ ಪದಗಳು, ಹರಿಕಥೆಗಳು, ಸೇರಿದಂತೆ ಮುಂತಾದ ಕಲೆಗಳನ್ನು ಇಂದಿನ ಯುವಸಮೂಹ ಕಲಿಯುವ ಮೂಲಕ ಜಾನಪದ ಸೊಗಡನ್ನು ಉಳಿಸಲು ಮುಂದಾಗಬೇಕು’ ಎಂದು ಕಿನ್ನರಿ ಜೋಗಿ ಜಾನಪದ ಕಲಾವಿದ ನಾಗರಾಜ ಜೋಗಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಘೋಷಣೆಯೊಂದಿಗೆ ಜಾನಪದ ಉತ್ಸವ ಕಾರ್ಯಕ್ರಮವನ್ನು ರಾಗಿ, ಭತ್ತ ಹಾಗೂ ಆಹಾರ ಧಾನ್ಯಗಳ ರಾಶಿಗೆ ಪೂಜೆ ಸಲ್ಲಿಸುವ ಮೂಲಕ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಯುವ ಪೀಳಿಗೆ ಪಾಶ್ಚಿಮಾತ್ಯ ಮೋಹಕ್ಕೆ ಒಳಗಾಗದೆ ದೇಶಿ ಸಂಸ್ಕೃತಿ ಹಾಗೂ ಜಾನಪದ ಸೊಗಡನ್ನು ಅರಿತು ಸಂಸ್ಕೃತಿಯ ಉಳಿವಿಗೆ ಮುಂದಾಗಬೇಕಿದೆ. ಜಾನಪದ ಸಾಹಿತ್ಯ, ಕಲೆಯ ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಐಕ್ಯೂಎಸಿ ಸಂಚಾಲಕ ಸಂತೋಷ.ಸಿ ಮಾತನಾಡಿ, ‘ಜಾನಪದ ಸಂಸ್ಕೃತಿ ಅಳಿದರೆ ನಮ್ಮತನವನ್ನು ನಾವು ಕಳೆದುಕೊಂಡಂತೆ, ಜಾನಪದ ಸೊಗಡಿನಲ್ಲೇ ಭಾರತೀಯ ಮೂಲ, ಪರಂಪರೆಯ ಸತ್ಯ ಅಡಗಿದೆ. ಹಾಗಾಗಿ ಜಾನಪದ ಸಂಸ್ಕೃತಿ ಉಳಿಸಿ ಪೋಷಿಸಬೇಕು’ ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳಿಂದ ಹಾಗೂ ಕಿನ್ನರಿ ಜೋಗಿ ಜಾನಪದ ಕಲಾವಿದರು ಜಾನಪದ ಗೀತೆ, ತತ್ವಪದ, ಗಿಗೀ ಪದಗಳನ್ನು ಹಾಡಿ ರಂಜಿಸಿದರು. ವಿದ್ಯಾರ್ಥಿಗಳು ಜಾನಪದ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.</p>.<p>ಸಂಸ್ಕೃತಿ ವಿಭಾಗದ ಸಂಚಾಲಕಿ ಶಾರದಾ, ಮಹೇಶ ಅಕ್ಕಿವಳ್ಳಿ, ಶಾಂತಪ್ಪ ಲಮಾಣಿ, ಸಿ.ಶಾರದಮ್ಮ, ರಾಜಶೇಖರ್, ಪ್ರಿಯಾಂಕ, ರಮೇಶ್.ಆರ್, ಕಲ್ಪನ.ಎಸ್.ಪಿ, ಮಹೇಶ್ ಅಕ್ಕಿವಳ್ಳಿ, ರವಿ.ಎಂ, ಪ್ರಶಾಂತ ಬಾರಾಟಕ್ಕೆ, ಹನುಮಂತಪ್ಪ ಆನ್ವೇರಿ, ಭಾರ್ಗವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಳವಳ್ಳಿ</strong>: ‘ಜನಪದ ಕಲೆ, ರಂಗಭೂಮಿ, ಜಾನಪದ ಗೀತೆಗಳು, ಕಲಾ ನೃತ್ಯಗಳು, ಸೋಬಾನೆ ಪದಗಳು, ಹರಿಕಥೆಗಳು, ಸೇರಿದಂತೆ ಮುಂತಾದ ಕಲೆಗಳನ್ನು ಇಂದಿನ ಯುವಸಮೂಹ ಕಲಿಯುವ ಮೂಲಕ ಜಾನಪದ ಸೊಗಡನ್ನು ಉಳಿಸಲು ಮುಂದಾಗಬೇಕು’ ಎಂದು ಕಿನ್ನರಿ ಜೋಗಿ ಜಾನಪದ ಕಲಾವಿದ ನಾಗರಾಜ ಜೋಗಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಘೋಷಣೆಯೊಂದಿಗೆ ಜಾನಪದ ಉತ್ಸವ ಕಾರ್ಯಕ್ರಮವನ್ನು ರಾಗಿ, ಭತ್ತ ಹಾಗೂ ಆಹಾರ ಧಾನ್ಯಗಳ ರಾಶಿಗೆ ಪೂಜೆ ಸಲ್ಲಿಸುವ ಮೂಲಕ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಯುವ ಪೀಳಿಗೆ ಪಾಶ್ಚಿಮಾತ್ಯ ಮೋಹಕ್ಕೆ ಒಳಗಾಗದೆ ದೇಶಿ ಸಂಸ್ಕೃತಿ ಹಾಗೂ ಜಾನಪದ ಸೊಗಡನ್ನು ಅರಿತು ಸಂಸ್ಕೃತಿಯ ಉಳಿವಿಗೆ ಮುಂದಾಗಬೇಕಿದೆ. ಜಾನಪದ ಸಾಹಿತ್ಯ, ಕಲೆಯ ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಐಕ್ಯೂಎಸಿ ಸಂಚಾಲಕ ಸಂತೋಷ.ಸಿ ಮಾತನಾಡಿ, ‘ಜಾನಪದ ಸಂಸ್ಕೃತಿ ಅಳಿದರೆ ನಮ್ಮತನವನ್ನು ನಾವು ಕಳೆದುಕೊಂಡಂತೆ, ಜಾನಪದ ಸೊಗಡಿನಲ್ಲೇ ಭಾರತೀಯ ಮೂಲ, ಪರಂಪರೆಯ ಸತ್ಯ ಅಡಗಿದೆ. ಹಾಗಾಗಿ ಜಾನಪದ ಸಂಸ್ಕೃತಿ ಉಳಿಸಿ ಪೋಷಿಸಬೇಕು’ ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳಿಂದ ಹಾಗೂ ಕಿನ್ನರಿ ಜೋಗಿ ಜಾನಪದ ಕಲಾವಿದರು ಜಾನಪದ ಗೀತೆ, ತತ್ವಪದ, ಗಿಗೀ ಪದಗಳನ್ನು ಹಾಡಿ ರಂಜಿಸಿದರು. ವಿದ್ಯಾರ್ಥಿಗಳು ಜಾನಪದ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.</p>.<p>ಸಂಸ್ಕೃತಿ ವಿಭಾಗದ ಸಂಚಾಲಕಿ ಶಾರದಾ, ಮಹೇಶ ಅಕ್ಕಿವಳ್ಳಿ, ಶಾಂತಪ್ಪ ಲಮಾಣಿ, ಸಿ.ಶಾರದಮ್ಮ, ರಾಜಶೇಖರ್, ಪ್ರಿಯಾಂಕ, ರಮೇಶ್.ಆರ್, ಕಲ್ಪನ.ಎಸ್.ಪಿ, ಮಹೇಶ್ ಅಕ್ಕಿವಳ್ಳಿ, ರವಿ.ಎಂ, ಪ್ರಶಾಂತ ಬಾರಾಟಕ್ಕೆ, ಹನುಮಂತಪ್ಪ ಆನ್ವೇರಿ, ಭಾರ್ಗವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>