<p><strong>ಹಾವೇರಿ: </strong>‘ಸಮಾಜಕ್ಕೆ ಸನ್ಮಾರ್ಗ ತೋರಿಸುವ ಗುರು ಶರಣ ಸಂಸ್ಕೃತಿಯ ಅವಿಭಾಜ್ಯ ಅಂಗಗಳಾದ ಷಟಸ್ಥಳ ಮಾರ್ಗಗಳನ್ನು ಅನುಸರಿಸಬೇಕು. ಅಂದಾಗ ಮಾತ್ರ ಲಿಂಗಾಂಗ ಸಾಮರಸ್ಯ ಸಾಧಿಸಬಹುದು’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ನಗರದ ಹುಕ್ಕೇರಿಮಠದಲ್ಲಿ ಹಮ್ಮಿಕೊಂಡಿರುವ ಶಿವಬಸವ ಸ್ವಾಮಿಗಳ 75ನೇ ಹಾಗೂ ಶಿವಲಿಂಗ ಶ್ರೀಗಳ 12ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ‘ನಮ್ಮೂರು ಜಾತ್ರೆ’ ನಿಮಿತ್ತ ಷಟಸ್ಥಳ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.</p>.<p>‘ಶರಣ ಸಂಸ್ಕೃತಿಯಲ್ಲಿ ಷಟಸ್ಥಳಗಳು ಅವಿಭಾಜ್ಯ ಅಂಗಗಳಾಗಿದ್ದು, ಇದು ಆತ್ಮೋನ್ನತಿಗೆ ಮಾರ್ಗದರ್ಶನವಾಗಿವೆ. ಸಾಮಾನ್ಯ ಸಾಧಕನಿಂದ ಅಸಾಮಾನ್ಯ ಶಿವಯೋಗಿವರೆಗೆ ದಿವ್ಯ ಬೆಳಕನ್ನು ನೀಡುವ ಚಿಂತಾಮಣಿಯಾಗಿದೆ’ ಎಂದು ಹೇಳಿದರು.</p>.<p>‘12ನೇ ಶತಮಾನದಲ್ಲಿ ಶಿವಶರಣರು ಲಿಂಗಾಂಗ ಸಾಮರಸ್ಯಕ್ಕೆ ಷಟಸ್ಥಳವೇ ಮಾರ್ಗ ಎಂದು ಪ್ರತಿಪಾದಿಸಿದ್ದು, ಸಾಮಾನ್ಯನು ಭಕ್ತನಾಗಿ, ಮಹೇಶನಾಗಿ, ಪ್ರಸಾದಿಯಾಗಿ, ಪ್ರಾಣಲಿಂಗಿಯಾಗಿ, ಶರಣನಾಗಿ ಐಕ್ಯನಾಗುತ್ತಾನೆ. ಇಂಥ ಕ್ರಮಸಮುಚ್ಚಯವನ್ನು ಎಲ್ಲ ಬಸವಾದಿ ಶರಣರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು’ ಎಂದು ಹೇಳಿದರು.</p>.<p>ಶಿವಲಿಂಗೇಶ್ವರ ವಿದ್ಯಾಪೀಠದ ಅಧ್ಯಕ್ಷ ಎಸ್.ಎಸ್. ಮುಷ್ಠಿ, ವೀರಣ್ಣ ಅಂಗಡಿ, ಪಿ.ಡಿ.ಶಿರೂರ, ಎಂ.ಎಸ್. ಕೋರಿಶೆಟ್ಟರ, ತಮ್ಮಣ್ಣ ಮುದ್ದಿ, ನಗರಸಭೆ ಸದಸ್ಯ ಮಲ್ಲಿಕಾರ್ಜುನ ಸಾತೇನಹಳ್ಳಿ, ಶಿವಯೋಗಿ ವಾಲಿಶೆಟ್ಟರ, ಶಿವಯೋಗಿ ಯರೇಶಿಮಿ, ಬಿ.ಎಸ್. ಸಾವಿರಮಠ, ಎಸ್.ಎಂ. ಕಡೇಮನಿ, ಡಾ.ಬಸವರಾಜ ವೀರಾಪುರ, ಜಗದೀಶ ತುಪ್ಪದಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>‘ಸಮಾಜಕ್ಕೆ ಸನ್ಮಾರ್ಗ ತೋರಿಸುವ ಗುರು ಶರಣ ಸಂಸ್ಕೃತಿಯ ಅವಿಭಾಜ್ಯ ಅಂಗಗಳಾದ ಷಟಸ್ಥಳ ಮಾರ್ಗಗಳನ್ನು ಅನುಸರಿಸಬೇಕು. ಅಂದಾಗ ಮಾತ್ರ ಲಿಂಗಾಂಗ ಸಾಮರಸ್ಯ ಸಾಧಿಸಬಹುದು’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ನಗರದ ಹುಕ್ಕೇರಿಮಠದಲ್ಲಿ ಹಮ್ಮಿಕೊಂಡಿರುವ ಶಿವಬಸವ ಸ್ವಾಮಿಗಳ 75ನೇ ಹಾಗೂ ಶಿವಲಿಂಗ ಶ್ರೀಗಳ 12ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ‘ನಮ್ಮೂರು ಜಾತ್ರೆ’ ನಿಮಿತ್ತ ಷಟಸ್ಥಳ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.</p>.<p>‘ಶರಣ ಸಂಸ್ಕೃತಿಯಲ್ಲಿ ಷಟಸ್ಥಳಗಳು ಅವಿಭಾಜ್ಯ ಅಂಗಗಳಾಗಿದ್ದು, ಇದು ಆತ್ಮೋನ್ನತಿಗೆ ಮಾರ್ಗದರ್ಶನವಾಗಿವೆ. ಸಾಮಾನ್ಯ ಸಾಧಕನಿಂದ ಅಸಾಮಾನ್ಯ ಶಿವಯೋಗಿವರೆಗೆ ದಿವ್ಯ ಬೆಳಕನ್ನು ನೀಡುವ ಚಿಂತಾಮಣಿಯಾಗಿದೆ’ ಎಂದು ಹೇಳಿದರು.</p>.<p>‘12ನೇ ಶತಮಾನದಲ್ಲಿ ಶಿವಶರಣರು ಲಿಂಗಾಂಗ ಸಾಮರಸ್ಯಕ್ಕೆ ಷಟಸ್ಥಳವೇ ಮಾರ್ಗ ಎಂದು ಪ್ರತಿಪಾದಿಸಿದ್ದು, ಸಾಮಾನ್ಯನು ಭಕ್ತನಾಗಿ, ಮಹೇಶನಾಗಿ, ಪ್ರಸಾದಿಯಾಗಿ, ಪ್ರಾಣಲಿಂಗಿಯಾಗಿ, ಶರಣನಾಗಿ ಐಕ್ಯನಾಗುತ್ತಾನೆ. ಇಂಥ ಕ್ರಮಸಮುಚ್ಚಯವನ್ನು ಎಲ್ಲ ಬಸವಾದಿ ಶರಣರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು’ ಎಂದು ಹೇಳಿದರು.</p>.<p>ಶಿವಲಿಂಗೇಶ್ವರ ವಿದ್ಯಾಪೀಠದ ಅಧ್ಯಕ್ಷ ಎಸ್.ಎಸ್. ಮುಷ್ಠಿ, ವೀರಣ್ಣ ಅಂಗಡಿ, ಪಿ.ಡಿ.ಶಿರೂರ, ಎಂ.ಎಸ್. ಕೋರಿಶೆಟ್ಟರ, ತಮ್ಮಣ್ಣ ಮುದ್ದಿ, ನಗರಸಭೆ ಸದಸ್ಯ ಮಲ್ಲಿಕಾರ್ಜುನ ಸಾತೇನಹಳ್ಳಿ, ಶಿವಯೋಗಿ ವಾಲಿಶೆಟ್ಟರ, ಶಿವಯೋಗಿ ಯರೇಶಿಮಿ, ಬಿ.ಎಸ್. ಸಾವಿರಮಠ, ಎಸ್.ಎಂ. ಕಡೇಮನಿ, ಡಾ.ಬಸವರಾಜ ವೀರಾಪುರ, ಜಗದೀಶ ತುಪ್ಪದಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>