‘ಈಗಾಗಲೇ ಮನೆ ಮನೆಗೆ ಭೇಟಿ ನೀಡಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗೆ ಬೇಡಿಕೆ ಪಡೆಯಲಾಗುತ್ತಿದೆ. ಅರ್ಹ ಕಾರ್ಮಿಕರು ಉದ್ಯೋಗ ಖಾತ್ರಿ ಕೆಲಸದಲ್ಲಿ ಪಾಲ್ಗೊಳ್ಳಬೇಕು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಕೃಷಿ ಹೊಂಡ, ಬದು ನಿರ್ಮಾಣ ಸೇರಿದಂತೆ ಹಲವಾರು ಕಾಮಗಾರಿ ಕೈಗೊಳ್ಳಲು ರೈತರಿಗೆ ಅವಕಾಶವಿದೆ’ ಎಂದು ತಿಳಿಸಿದರು.