<p><strong>ಹಾವೇರಿ:</strong> ‘ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ, ಮಿಶ್ರ ಬೆಳೆ ಪದ್ಧತಿಯನ್ನು ಪ್ರೋತ್ಸಾಹಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶವಿದೆ. ಈ ಯೋಜನೆಗೆರಾಜ್ಯದಲ್ಲಿ ಹಾವೇರಿಯನ್ನು ‘ಪ್ರಾಯೋಗಿಕ ಜಿಲ್ಲೆ’ಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಏಕ ಬೆಳೆ ಪದ್ಧತಿಯಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಿ ಆದಾಯ ಹೆಚ್ಚಿಸಲು ಹಾವೇರಿ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್ನಲ್ಲಿ ಮಿಶ್ರ ಬೆಳೆಗೆ ಪ್ರೋತ್ಸಾಹ ನೀಡಲಾಗುತ್ತದೆ’ ಎಂದರು.</p>.<p>ಈ ಯೋಜನೆಯಡಿ 401 ಕ್ವಿಂಟಲ್ ತೊಗರಿ, 240 ಕ್ವಿಂಟಲ್ ಶೇಂಗಾ, 2,800 ಕ್ವಿಂಟಲ್ ಸೋಯಾ ಅವರೆ ಬಿತ್ತನೆ ಬೀಜ ಸೇರಿದಂತೆ ಒಟ್ಟು 2,441 ಕ್ವಿಂಟಲ್ ಬಿತ್ತನೆ ಬೀಜವನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುವುದು. ಒಟ್ಟು ₹2.44 ಕೋಟಿ ಮೌಲ್ಯದ ಬಿತ್ತನೆ ಬೀಜವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p><strong>ಲಾಕ್ಡೌನ್ ವಿಸ್ತರಣೆ: ಜೂನ್ 5ರಂದು ನಿರ್ಧಾರ<br />ರಟ್ಟೀಹಳ್ಳಿ (ಹಾವೇರಿ):</strong> ‘ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವಿಸ್ತರಣೆಯ ಕುರಿತು ಜೂನ್ 5ರಂದು ನಿಗದಿಯಾಗಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ರಟ್ಟೀಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ,ಜೂನ್ 4ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಜಿಲ್ಲೆಗಳಲ್ಲಿರುವ ಪರಿಸ್ಥಿತಿಯನ್ನು ಅರಿತುಕೊಳ್ಳಲಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆ ಇದೆ. ಕೆಲ ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಿದೆ. ಈ ಎಲ್ಲ ಅಂಶಗಳನ್ನು ಗಮನಿಸಿ ತಜ್ಞರು ನೀಡುವ ವರದಿಯನ್ನು ವಿಶ್ಲೇಷಣೆ ಮಾಡಿ ರಾಜ್ಯದಲ್ಲಿ ಲಾಕ್ಡೌನ್ ಯಾವ ರೀತಿ ಇರಬೇಕು ಮತ್ತು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ, ಮಿಶ್ರ ಬೆಳೆ ಪದ್ಧತಿಯನ್ನು ಪ್ರೋತ್ಸಾಹಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶವಿದೆ. ಈ ಯೋಜನೆಗೆರಾಜ್ಯದಲ್ಲಿ ಹಾವೇರಿಯನ್ನು ‘ಪ್ರಾಯೋಗಿಕ ಜಿಲ್ಲೆ’ಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಏಕ ಬೆಳೆ ಪದ್ಧತಿಯಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಿ ಆದಾಯ ಹೆಚ್ಚಿಸಲು ಹಾವೇರಿ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್ನಲ್ಲಿ ಮಿಶ್ರ ಬೆಳೆಗೆ ಪ್ರೋತ್ಸಾಹ ನೀಡಲಾಗುತ್ತದೆ’ ಎಂದರು.</p>.<p>ಈ ಯೋಜನೆಯಡಿ 401 ಕ್ವಿಂಟಲ್ ತೊಗರಿ, 240 ಕ್ವಿಂಟಲ್ ಶೇಂಗಾ, 2,800 ಕ್ವಿಂಟಲ್ ಸೋಯಾ ಅವರೆ ಬಿತ್ತನೆ ಬೀಜ ಸೇರಿದಂತೆ ಒಟ್ಟು 2,441 ಕ್ವಿಂಟಲ್ ಬಿತ್ತನೆ ಬೀಜವನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುವುದು. ಒಟ್ಟು ₹2.44 ಕೋಟಿ ಮೌಲ್ಯದ ಬಿತ್ತನೆ ಬೀಜವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p><strong>ಲಾಕ್ಡೌನ್ ವಿಸ್ತರಣೆ: ಜೂನ್ 5ರಂದು ನಿರ್ಧಾರ<br />ರಟ್ಟೀಹಳ್ಳಿ (ಹಾವೇರಿ):</strong> ‘ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವಿಸ್ತರಣೆಯ ಕುರಿತು ಜೂನ್ 5ರಂದು ನಿಗದಿಯಾಗಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ರಟ್ಟೀಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ,ಜೂನ್ 4ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಜಿಲ್ಲೆಗಳಲ್ಲಿರುವ ಪರಿಸ್ಥಿತಿಯನ್ನು ಅರಿತುಕೊಳ್ಳಲಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆ ಇದೆ. ಕೆಲ ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಿದೆ. ಈ ಎಲ್ಲ ಅಂಶಗಳನ್ನು ಗಮನಿಸಿ ತಜ್ಞರು ನೀಡುವ ವರದಿಯನ್ನು ವಿಶ್ಲೇಷಣೆ ಮಾಡಿ ರಾಜ್ಯದಲ್ಲಿ ಲಾಕ್ಡೌನ್ ಯಾವ ರೀತಿ ಇರಬೇಕು ಮತ್ತು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>