ಭೂಸುಧಾರಣಾ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ವಿರೋಧಿಸಿ ಹೋರಾಟ ನಡೆಸುತ್ತೇವೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕು. ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸುತ್ತೇವೆ. ಬಡವರಿಗೆ ಶಿಕ್ಷಣವನ್ನು ನಿರಾಕರಣೆ ಮಾಡುವ ಕೇಂದ್ರ ಸರ್ಕಾರದ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ವಿರೋಧಿಸುತ್ತೇವೆ ಎಂದರು.