<p><strong>ಹಾವೇರಿ/ಬ್ಯಾಡಗಿ:</strong> ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ನಿರ್ಮಿಸಿರುವ ಮೇಲ್ಸೇತುವೆಗೆ ಚಾಲನೆ ನೀಡುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನಡುವೆ ‘ಪ್ರಚಾರ’ ಪೈಪೋಟಿ ಏರ್ಪಟ್ಟಿದೆ.</p>.<p>ಹೆದ್ದಾರಿ ಪಕ್ಕದಲ್ಲೇ ಮೋಟೆಬೆನ್ನೂರಿದ್ದು, ವಾಹನಗಳ ದಟ್ಟಣೆಯಿಂದ ಸ್ಥಳೀಯ ಜನರ ಓಡಾಟಕ್ಕೆ ಕಷ್ಟವಾಗುತ್ತಿತ್ತು. ಹೀಗಾಗಿ, ಮೇಲ್ಸೇತುವೆ ನಿರ್ಮಿಸುವಂತೆ ಸ್ಥಳೀಯರು ಒತ್ತಾಯಿಸಿದ್ದರು. ಅದರಂತೆ ಮೇಲ್ಸೇತುವೆ ನಿರ್ಮಿಸಲಾಗಿದೆ.</p>.<p>ಹುಬ್ಬಳ್ಳಿಯಿಂದ ಬೆಂಗಳೂರು ಹಾಗೂ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಾಗುವ ಎರಡೂ ಮಾರ್ಗದಲ್ಲೂ ಮೇಲ್ಸೇತುವೆ ಮೂಲಕ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಮೇಲ್ಸೇತುವೆಯ ಕೆಳಭಾಗದಲ್ಲಿರುವ ಕೆಳ ಸೇತುವೆಯಲ್ಲಿ ಸ್ಥಳೀಯರ ವಾಹನಗಳ ಓಡಾಟಕ್ಕೆ ಅವಕಾಶವಿದೆ.</p>.<p>ಜುಲೈ 21ರಂದು ಜಿಲ್ಲೆಗೆ ಭೇಟಿ ನೀಡಿದ್ದ ಸಚಿವ ಶಿವಾನಂದ ಪಾಟೀಲ, ಮೇಲ್ಸೇತುವೆಯ ಒಂದು ಮಾರ್ಗದಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಚಾಲನೆ ನೀಡಿ ಹಸಿರು ನಿಶಾನೆ ತೋರಿಸಿ ಫೋಟೊ ತೆಗೆಸಿಕೊಂಡಿದ್ದರು. ಶಾಸಕರಾದ ಬಸವರಾಜ ಶಿವಣ್ಣನವರ, ಪ್ರಕಾಶ ಕೋಳಿವಾಡ ಹಾಜರಿದ್ದರು.</p>.<p>ಸಚಿವರು ಚಾಲನೆ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ‘ಮೇಲ್ಸೇತುವೆ ಚಾಲನೆ ವಿಚಾರದಲ್ಲಿ ಸಚಿವರು ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಸಂಸದರನ್ನು ಆಹ್ವಾನಿಸದೇ ಅವಮಾನ ಮಾಡಿದ್ದಾರೆ’ ಎಂದು ದೂರಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಸವರಾಜ ಶಿವಣ್ಣನವರ, ‘ಜನರ ಹಿತದೃಷ್ಟಿಯಿಂದ ಒಂದು ಬದಿಯ ಮಾರ್ಗಕ್ಕೆ ಸಚಿವರು ಚಾಲನೆ ನೀಡಿದ್ದಾರೆ. ಅಪೂರ್ಣಗೊಂಡಿದ್ದ ಮೇಲ್ಸೇತುವೆಯನ್ನು ಪೂರ್ಣಗೊಳಿಸುವಂತೆ ನಾನು ಸಹ ಸಂಸದ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದೆ’ ಎಂದು ಹೇಳಿದ್ದರು.</p>.<p>ಈ ಬೆಳವಣಿಗೆ ನಡುವೆಯೇ ಶನಿವಾರ (ಆಗಸ್ಟ್ 2) ಮೇಲ್ಸೇತುವೆ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಬಸವರಾಜ ಬೊಮ್ಮಾಯಿ, ತಾವು ಸಹ ಹಸಿರು ನಿಶಾನೆ ತೋರಿಸಿ ವಾಹನಗಳ ಸಂಚಾರಕ್ಕೆ ಚಾಲನೆ ನೀಡಿ ಫೋಟೊ ತೆಗೆಸಿಕೊಂಡರು. ವಿರೂಪಾಕ್ಷಪ್ಪ ಬಳ್ಳಾರಿ ಸಹ ಇದ್ದರು. </p>.<p><strong>ಹೆಸರಿಗಾಗಿ ಎರಡು ಬಾರಿ ಚಾಲನೆ:</strong> ‘ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ನಡೆಯುತ್ತಿದ್ದವು. ಮೇಲ್ಸೇತುವೆ ನಿರ್ಮಿಸಬೇಕೆಂಬುದು ಸ್ಥಳೀಯರ ಹಲವು ವರ್ಷಗಳ ಕನಸ್ಸಾಗಿತ್ತು. ಕಾಮಗಾರಿ ಆರಂಭವಾದ ದಿನದಲ್ಲಿ ಸಾಕಷ್ಟು ಅಡೆತಡೆಗಳಿದ್ದವು. ಈಗ ಮೇಲ್ಸೇತುವೆ ನಿರ್ಮಾಣವಾಗಿದೆ. ಆದರೆ, ಜನಪ್ರತಿನಿಧಿಗಳು ತಮ್ಮ ಹೆಸರಿಗಾಗಿ ಪೈಪೋಟಿ ನಡೆಸಿದ್ದಾರೆ’ ಎಂದು ಸ್ಥಳೀಯರು ಹೇಳಿದರು.</p>.<p>‘ಸಚಿವರು ಬಂದು ಚಾಲನೆ ನೀಡಿದ್ದ ಜಾಗಕ್ಕೆ, ಸಂಸದರೂ ಬಂದು ಚಾಲನೆ ನೀಡಿದ್ದಾರೆ. ಇಬ್ಬರೂ ಹಸಿರು ನಿಶಾನೆ ತೋರಿಸಿ ಹೋಗಿದ್ದಾರೆ. ಮೇಲ್ಸೇತುವೆಯಲ್ಲಿ ಇನ್ನು ಕೆಲ ಕೆಲಸಗಳು ಬಾಕಿಯಿದ್ದು, ಅವುಗಳನ್ನು ಮಾಡಿಸಲು ಅವರಿಬ್ಬರು ಗಮನ ಹರಿಸಬೇಕು’ ಎಂದು ತಿಳಿಸಿದರು.</p>.<p><strong>ತಾಳಕ್ಕೆ ತಕ್ಕಂತೆ ಅಧಿಕಾರಿಗಳ ಕುಣಿತ:</strong> ‘ಮೇಲ್ಸೇತುವೆ ನಿರ್ಮಿಸಿರುವ ಇಲಾಖೆಯ ಅಧಿಕಾರಿಗಳು, ಒಂದೇ ಬಾರಿ ಕಾರ್ಯಕ್ರಮ ನಡೆಸಿ ಚಾಲನೆ ನೀಡಬಹುದಿತ್ತು. ಆದರೆ, ಅವರು ಜನಪ್ರತಿನಿಧಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಮೇಲ್ಸೇತುವೆ ಮಾತ್ರವಲ್ಲದೇ ಇಂಥ ಹಲವು ಕೆಲಸಗಳ ಉದ್ಘಾಟನೆಯಲ್ಲಿ ಇದೇ ಆಗುತ್ತಿದೆ’ ಎಂದು ಸ್ಥಳೀಯರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ/ಬ್ಯಾಡಗಿ:</strong> ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ನಿರ್ಮಿಸಿರುವ ಮೇಲ್ಸೇತುವೆಗೆ ಚಾಲನೆ ನೀಡುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನಡುವೆ ‘ಪ್ರಚಾರ’ ಪೈಪೋಟಿ ಏರ್ಪಟ್ಟಿದೆ.</p>.<p>ಹೆದ್ದಾರಿ ಪಕ್ಕದಲ್ಲೇ ಮೋಟೆಬೆನ್ನೂರಿದ್ದು, ವಾಹನಗಳ ದಟ್ಟಣೆಯಿಂದ ಸ್ಥಳೀಯ ಜನರ ಓಡಾಟಕ್ಕೆ ಕಷ್ಟವಾಗುತ್ತಿತ್ತು. ಹೀಗಾಗಿ, ಮೇಲ್ಸೇತುವೆ ನಿರ್ಮಿಸುವಂತೆ ಸ್ಥಳೀಯರು ಒತ್ತಾಯಿಸಿದ್ದರು. ಅದರಂತೆ ಮೇಲ್ಸೇತುವೆ ನಿರ್ಮಿಸಲಾಗಿದೆ.</p>.<p>ಹುಬ್ಬಳ್ಳಿಯಿಂದ ಬೆಂಗಳೂರು ಹಾಗೂ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಾಗುವ ಎರಡೂ ಮಾರ್ಗದಲ್ಲೂ ಮೇಲ್ಸೇತುವೆ ಮೂಲಕ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಮೇಲ್ಸೇತುವೆಯ ಕೆಳಭಾಗದಲ್ಲಿರುವ ಕೆಳ ಸೇತುವೆಯಲ್ಲಿ ಸ್ಥಳೀಯರ ವಾಹನಗಳ ಓಡಾಟಕ್ಕೆ ಅವಕಾಶವಿದೆ.</p>.<p>ಜುಲೈ 21ರಂದು ಜಿಲ್ಲೆಗೆ ಭೇಟಿ ನೀಡಿದ್ದ ಸಚಿವ ಶಿವಾನಂದ ಪಾಟೀಲ, ಮೇಲ್ಸೇತುವೆಯ ಒಂದು ಮಾರ್ಗದಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಚಾಲನೆ ನೀಡಿ ಹಸಿರು ನಿಶಾನೆ ತೋರಿಸಿ ಫೋಟೊ ತೆಗೆಸಿಕೊಂಡಿದ್ದರು. ಶಾಸಕರಾದ ಬಸವರಾಜ ಶಿವಣ್ಣನವರ, ಪ್ರಕಾಶ ಕೋಳಿವಾಡ ಹಾಜರಿದ್ದರು.</p>.<p>ಸಚಿವರು ಚಾಲನೆ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ‘ಮೇಲ್ಸೇತುವೆ ಚಾಲನೆ ವಿಚಾರದಲ್ಲಿ ಸಚಿವರು ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಸಂಸದರನ್ನು ಆಹ್ವಾನಿಸದೇ ಅವಮಾನ ಮಾಡಿದ್ದಾರೆ’ ಎಂದು ದೂರಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಸವರಾಜ ಶಿವಣ್ಣನವರ, ‘ಜನರ ಹಿತದೃಷ್ಟಿಯಿಂದ ಒಂದು ಬದಿಯ ಮಾರ್ಗಕ್ಕೆ ಸಚಿವರು ಚಾಲನೆ ನೀಡಿದ್ದಾರೆ. ಅಪೂರ್ಣಗೊಂಡಿದ್ದ ಮೇಲ್ಸೇತುವೆಯನ್ನು ಪೂರ್ಣಗೊಳಿಸುವಂತೆ ನಾನು ಸಹ ಸಂಸದ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದೆ’ ಎಂದು ಹೇಳಿದ್ದರು.</p>.<p>ಈ ಬೆಳವಣಿಗೆ ನಡುವೆಯೇ ಶನಿವಾರ (ಆಗಸ್ಟ್ 2) ಮೇಲ್ಸೇತುವೆ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಬಸವರಾಜ ಬೊಮ್ಮಾಯಿ, ತಾವು ಸಹ ಹಸಿರು ನಿಶಾನೆ ತೋರಿಸಿ ವಾಹನಗಳ ಸಂಚಾರಕ್ಕೆ ಚಾಲನೆ ನೀಡಿ ಫೋಟೊ ತೆಗೆಸಿಕೊಂಡರು. ವಿರೂಪಾಕ್ಷಪ್ಪ ಬಳ್ಳಾರಿ ಸಹ ಇದ್ದರು. </p>.<p><strong>ಹೆಸರಿಗಾಗಿ ಎರಡು ಬಾರಿ ಚಾಲನೆ:</strong> ‘ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ನಡೆಯುತ್ತಿದ್ದವು. ಮೇಲ್ಸೇತುವೆ ನಿರ್ಮಿಸಬೇಕೆಂಬುದು ಸ್ಥಳೀಯರ ಹಲವು ವರ್ಷಗಳ ಕನಸ್ಸಾಗಿತ್ತು. ಕಾಮಗಾರಿ ಆರಂಭವಾದ ದಿನದಲ್ಲಿ ಸಾಕಷ್ಟು ಅಡೆತಡೆಗಳಿದ್ದವು. ಈಗ ಮೇಲ್ಸೇತುವೆ ನಿರ್ಮಾಣವಾಗಿದೆ. ಆದರೆ, ಜನಪ್ರತಿನಿಧಿಗಳು ತಮ್ಮ ಹೆಸರಿಗಾಗಿ ಪೈಪೋಟಿ ನಡೆಸಿದ್ದಾರೆ’ ಎಂದು ಸ್ಥಳೀಯರು ಹೇಳಿದರು.</p>.<p>‘ಸಚಿವರು ಬಂದು ಚಾಲನೆ ನೀಡಿದ್ದ ಜಾಗಕ್ಕೆ, ಸಂಸದರೂ ಬಂದು ಚಾಲನೆ ನೀಡಿದ್ದಾರೆ. ಇಬ್ಬರೂ ಹಸಿರು ನಿಶಾನೆ ತೋರಿಸಿ ಹೋಗಿದ್ದಾರೆ. ಮೇಲ್ಸೇತುವೆಯಲ್ಲಿ ಇನ್ನು ಕೆಲ ಕೆಲಸಗಳು ಬಾಕಿಯಿದ್ದು, ಅವುಗಳನ್ನು ಮಾಡಿಸಲು ಅವರಿಬ್ಬರು ಗಮನ ಹರಿಸಬೇಕು’ ಎಂದು ತಿಳಿಸಿದರು.</p>.<p><strong>ತಾಳಕ್ಕೆ ತಕ್ಕಂತೆ ಅಧಿಕಾರಿಗಳ ಕುಣಿತ:</strong> ‘ಮೇಲ್ಸೇತುವೆ ನಿರ್ಮಿಸಿರುವ ಇಲಾಖೆಯ ಅಧಿಕಾರಿಗಳು, ಒಂದೇ ಬಾರಿ ಕಾರ್ಯಕ್ರಮ ನಡೆಸಿ ಚಾಲನೆ ನೀಡಬಹುದಿತ್ತು. ಆದರೆ, ಅವರು ಜನಪ್ರತಿನಿಧಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಮೇಲ್ಸೇತುವೆ ಮಾತ್ರವಲ್ಲದೇ ಇಂಥ ಹಲವು ಕೆಲಸಗಳ ಉದ್ಘಾಟನೆಯಲ್ಲಿ ಇದೇ ಆಗುತ್ತಿದೆ’ ಎಂದು ಸ್ಥಳೀಯರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>