ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌಷ್ಟಿಕ ಆಹಾರದ ಅರಿವು ಅಗತ್ಯ: ಭಾರತಿ ವಾಳ್ವೇಕರ

Last Updated 9 ಡಿಸೆಂಬರ್ 2020, 15:34 IST
ಅಕ್ಷರ ಗಾತ್ರ

ಹಾವೇರಿ: ‘ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಕಂಡುಬರುವ ರಕ್ತಹೀನತೆಯನ್ನು ಹೋಗಲಾಡಿಸಲು ಪೋಷಣ ಅಭಿಯಾನ ಯೋಜನೆ ಬಹಳ ಸಹಕಾರಿಯಾಗಿದೆ’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೇಕರ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಬಾಲಭವನ ಸಭಾಂಗಣದಲ್ಲಿ ಬುಧವಾರ ನಡೆದ ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಮಟ್ಟದ ಎರಡು ದಿನಗಳ ಐ.ಎಲ್.ಎ. ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತಹೀನತೆಯಿಂದ ಬಳಲುತ್ತಿರುವ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ ತಪಾಸಣೆ ನಡೆಸಿ, ರಕ್ತ ಹೀನತೆಯನ್ನು ಹೋಗಲಾಡಿಸಬೇಕು ಹಾಗೂ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವೈ.ಶೆಟ್ಟೆಪ್ಪನವರ ಅವರು ಪೋಷಣ ಅಭಿಯಾನ ಯೋಜನೆ ಕುರಿತು ವಿವರಿಸಿದರು.

ಪೋಷಣ ಅಭಿಯಾನದ ರಾಜ್ಯ ಸಂಪನ್ಮೂಲ ತಂಡದ ಸದಸ್ಯರಾದ ಅಪ್ಪಣ್ಣ ಹೆಗಡೆ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್, ಹಾನಗಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂತೋಷ ಕುಮಾರ ಎಚ್. ಹಾಗೂ ಬಿಂದು ಕೆಂಚಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT