ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಸಂಪುಟದಿಂದ ಅಸಮರ್ಥರನ್ನು ಕೈಬಿಡಲಿ’

Last Updated 1 ಜೂನ್ 2020, 17:10 IST
ಅಕ್ಷರ ಗಾತ್ರ

ಹಾವೇರಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಂಪುಟದಿಂದ ಅಸಮರ್ಥರನ್ನು ಕೈಬಿಟ್ಟು, ಸಮರ್ಥರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ನೆಹರು ಓಲೇಕಾರ ಒತ್ತಾಯಿಸಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ,ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರವಿರುದ್ಧ ಯಾರೂ ಷಡ್ಯಂತ್ರ ನಡೆಸಿಲ್ಲ. ಆದರೆ ಅಧಿಕಾರ ಬೇಕು ಎನ್ನುವ ನಿಟ್ಟಿನಲ್ಲಿ ಬಿನ್ನಾಭಿಪ್ರಾಯಗಳು ಸಹಜ. ಸಚಿವ ಸ್ಥಾನ ಪಡೆಯಲು ನಾನಾ ರೀತಿಯ ತಂತ್ರಗಳನ್ನು ಮಾಡುತ್ತಿದ್ದಾರೆ. ಸಚಿವ ಸ್ಥಾನ ಸಿಗದೇ ಇದ್ದರೆ ಕೆಲವರು ಸರ್ಕಾರವನ್ನು ಕೆಡವುತ್ತೇವೆಎಂದು ಆಂತರಿಕವಾಗಿ ಹೇಳುತ್ತಿದ್ದಾರೆ. ಆದರೆ ಭಿನ್ನಾಭಿಪ್ರಾಯ ಶಮನವಾಗಲಿದೆ. ಉಮೇಶ ಕತ್ತಿ ಸಚಿವರಾಗಲಿದ್ದಾರೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು. ನಾನು ಬಲಗೈ ಸಮುದಾಯದ ಪ್ರಮುಖನಾಗಿದ್ದೇನೆ. ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇನೆ. ಮುಂದಿನ ಸಂಪುಟ ವಿಸ್ತರಣೆ ವೇಳೆನನಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT