ಕೋವಿಡ್ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ಇಲ್ಲ ಎಂದು ಕೆಲವು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುವ ಕುರಿತ ಪತ್ರಕರ್ತರ ಪ್ರಶ್ನೆಗೆ, ‘ಈ ರೀತಿ ಆದೇಶ ಹೊರಡಿಸುವುದು ಸರಿಯಲ್ಲ. ಸಾರ್ವಜನಿಕರ ಮನವೊಲಿಸಿ ಕೆಲಸ ಮಾಡಬೇಕು. ಕೋವಿಡ್ ಲಸಿಕೆ ಲಭ್ಯ ಇರುವುದರಿಂದ ಜನರು ಕೂಡ ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.