<p>ಹಾವೇರಿ: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಪರಿಷ್ಕೃತ ಆದೇಶದನ್ವಯ ಜಿಲ್ಲೆಯಲ್ಲಿ ಜುಲೈ 19ರ ಬೆಳಿಗ್ಗೆ 6 ಗಂಟೆವರೆಗೆ ನಿಗದಿತ ಚಟುವಟಿಕೆ ಹೊರತುಪಡಿಸಿ, ಉಳಿದೆಲ್ಲ ಚಟುವಳಿಕೆಗಳಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.</p>.<p>ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅತ್ಯವಶ್ಯ ಹಾಗೂ ತುರ್ತು ಚಟುವಟಿಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.</p>.<p>ಚಿತ್ರಮಂದಿರಗಳು ಮತ್ತು ಪಬ್ಗಳಿಗೆ ಅನುಮತಿ ಇರುವುದಿಲ್ಲ. ಕೋವಿಡ್ ಪ್ರಮಾಣಿತ ಎಸ್ಒಪಿ ಅನುಸರಿಸಿ ಸ್ಪರ್ಧಾತ್ಮಕ ತರಬೇತಿಗೆ ಮಾತ್ರ ಈಜುಕೊಳಗಳನ್ನು ತೆರೆಯಲು ಅನುಮತಿಸಿದೆ. ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳು, ಸ್ಟೇಡಿಯಂಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.</p>.<p>ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಅಕಾಡೆಮಿಕ್, ಸಾಂಸ್ಕೃತಿಕ, ಧಾರ್ಮಿಕ ಸಭೆ-ಸಮಾರಂಭ ಮತ್ತು ಇತರೆ ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ಇರುವುದಿಲ್ಲ. ಮದುವೆ, ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ 100 ಜನರಿಗೆ ಮೀರದಂತೆ ಅನುಮತಿ ನೀಡಲಾಗಿದೆ. ಅಂತ್ಯಸಂಸ್ಕಾರಕ್ಕೆ 20 ಜನರು ಮೀರದಂತೆ ನಡೆಸಲು ಅನುಮತಿ ನೀಡಲಾಗಿದೆ.</p>.<p>ದೇವಸ್ಥಾನ, ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಆದರೆ ಯಾವುದೇ ಸೇವೆಗಳಿಗೆ ಅನುಮತಿ ಇರುವುದಿಲ್ಲ. ಶೇ 100ರಷ್ಟು ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿ ನೀಡಲಾಗಿದೆ.<br />ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ಗಳು, ಮಾಲ್ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ ಸ್ಥಳಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಅನ್ವಯ ಕ್ರಮ ಕೈಗೊಳ್ಳಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಟುಟೋರಿಯಲ್ಸ್ ಮತ್ತು ಕಾಲೇಜುಗಳು ಮುಂದಿನ ಆದೇಶದವರೆಗೆ ಮುಚ್ಚಲ್ಪಟ್ಟಿರುತ್ತವೆ.</p>.<p>ಕೋವಿಡ್-19 ನಿಯಂತ್ರದನ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾವಗಿ ಮಾಸ್ಕ್ ಧಾರಣೆ, ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ ಧರಿಸದೇ ಓಡಾಡುವವವರಿಗೆ ನಗರ ಪ್ರದೇಶಗಳಲ್ಲಿ ₹250 ಹಾಗೂ ಇತರೆ ಪ್ರದೇಶಗಳಲ್ಲಿ ₹100 ದಂಡವನ್ನು ವಿಧಿಸಲಾಗುವುದು.</p>.<p>ಸಾರ್ವಜನಿಕರಲ್ಲಿ ಅಂತರವನ್ನು ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಯಾವುದೇ ವ್ಯಕ್ತಿ ಈ ನಿರ್ದೇಶನಗಳನ್ನು ಪಾಲಿಸಲು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ದಂಡನೆಗೆ ಅರ್ಹರಾಗುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಪರಿಷ್ಕೃತ ಆದೇಶದನ್ವಯ ಜಿಲ್ಲೆಯಲ್ಲಿ ಜುಲೈ 19ರ ಬೆಳಿಗ್ಗೆ 6 ಗಂಟೆವರೆಗೆ ನಿಗದಿತ ಚಟುವಟಿಕೆ ಹೊರತುಪಡಿಸಿ, ಉಳಿದೆಲ್ಲ ಚಟುವಳಿಕೆಗಳಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.</p>.<p>ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅತ್ಯವಶ್ಯ ಹಾಗೂ ತುರ್ತು ಚಟುವಟಿಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.</p>.<p>ಚಿತ್ರಮಂದಿರಗಳು ಮತ್ತು ಪಬ್ಗಳಿಗೆ ಅನುಮತಿ ಇರುವುದಿಲ್ಲ. ಕೋವಿಡ್ ಪ್ರಮಾಣಿತ ಎಸ್ಒಪಿ ಅನುಸರಿಸಿ ಸ್ಪರ್ಧಾತ್ಮಕ ತರಬೇತಿಗೆ ಮಾತ್ರ ಈಜುಕೊಳಗಳನ್ನು ತೆರೆಯಲು ಅನುಮತಿಸಿದೆ. ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳು, ಸ್ಟೇಡಿಯಂಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.</p>.<p>ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಅಕಾಡೆಮಿಕ್, ಸಾಂಸ್ಕೃತಿಕ, ಧಾರ್ಮಿಕ ಸಭೆ-ಸಮಾರಂಭ ಮತ್ತು ಇತರೆ ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ಇರುವುದಿಲ್ಲ. ಮದುವೆ, ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ 100 ಜನರಿಗೆ ಮೀರದಂತೆ ಅನುಮತಿ ನೀಡಲಾಗಿದೆ. ಅಂತ್ಯಸಂಸ್ಕಾರಕ್ಕೆ 20 ಜನರು ಮೀರದಂತೆ ನಡೆಸಲು ಅನುಮತಿ ನೀಡಲಾಗಿದೆ.</p>.<p>ದೇವಸ್ಥಾನ, ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಆದರೆ ಯಾವುದೇ ಸೇವೆಗಳಿಗೆ ಅನುಮತಿ ಇರುವುದಿಲ್ಲ. ಶೇ 100ರಷ್ಟು ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿ ನೀಡಲಾಗಿದೆ.<br />ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ಗಳು, ಮಾಲ್ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ ಸ್ಥಳಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಅನ್ವಯ ಕ್ರಮ ಕೈಗೊಳ್ಳಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಟುಟೋರಿಯಲ್ಸ್ ಮತ್ತು ಕಾಲೇಜುಗಳು ಮುಂದಿನ ಆದೇಶದವರೆಗೆ ಮುಚ್ಚಲ್ಪಟ್ಟಿರುತ್ತವೆ.</p>.<p>ಕೋವಿಡ್-19 ನಿಯಂತ್ರದನ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾವಗಿ ಮಾಸ್ಕ್ ಧಾರಣೆ, ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ ಧರಿಸದೇ ಓಡಾಡುವವವರಿಗೆ ನಗರ ಪ್ರದೇಶಗಳಲ್ಲಿ ₹250 ಹಾಗೂ ಇತರೆ ಪ್ರದೇಶಗಳಲ್ಲಿ ₹100 ದಂಡವನ್ನು ವಿಧಿಸಲಾಗುವುದು.</p>.<p>ಸಾರ್ವಜನಿಕರಲ್ಲಿ ಅಂತರವನ್ನು ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಯಾವುದೇ ವ್ಯಕ್ತಿ ಈ ನಿರ್ದೇಶನಗಳನ್ನು ಪಾಲಿಸಲು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ದಂಡನೆಗೆ ಅರ್ಹರಾಗುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>