ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮಾಜದ ಮುಖ್ಯವಾಹಿನಿಗೆ ಅಲೆಮಾರಿಗಳು ಬರಲಿ’

Last Updated 8 ಜನವರಿ 2021, 14:30 IST
ಅಕ್ಷರ ಗಾತ್ರ

ಹಾವೇರಿ: ಅಲೆಮಾರಿ/ ಅರೆಅಲೆಮಾರಿ ಜನಾಂಗದ ರಕ್ಷಣೆಗೆ ಹಾಗೂ ಸಾಮಾಜಿಕ ಸೌಲಭ್ಯ ಕಲ್ಪಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಅಲೆಮಾರಿ/ ಅರೆಅಲೆಮಾರಿ ಜನಾಂಗದವರು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎ. ಜಮಖಾನೆ ಹೇಳಿದರು.

ಹಾವೇರಿ ತಾಲ್ಲೂಕಿನ ಹಳೇಕಿತ್ತೂರು ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಹಾವೇರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಅಲೆಮಾರಿ/ ಅರೆಅಲೆಮಾರಿ ಜನಾಂಗದವರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳು ಶೋಷಣೆಯಿಂದ ಮುಕ್ತರಾಗಬೇಕು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಬಳಸಿಕೊಳ್ಳಬೇಕು ಎಂದ ಅವರು ಅಲೆಮಾರಿ/ ಅರೆಅಲೆಮಾರಿ ಜನಾಂಗದವರಿಗೆ ಮನೆ ನಿರ್ಮಾಣದ ಮಾಡಿಕೊಡುವ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ವನಿತಾ ಸುಂಕದ ಹಾಗೂಸಂಪನ್ಮೂಲ ವ್ಯಕ್ತಿ ಎಸ್.ಎಚ್.ಮಜೀದ್‌ ಮಾತನಾಡಿದರು.

ಪಿಡಿಒ ಶಾರದಾ ಜಾಲವಾಡಿ ಮಾತನಾಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ಲಕ್ಕವ್ವ ಮರಿಹೊನ್ನಪ್ಪನವರ, ಆರ್.ಸಿ ಹೊಸಮನಿ, ಗಿರೀಶ ರೋಣಿಮಠ, ಎಂ.ಎನ್ ಸಿದ್ದಪ್ಪನವರ, ಸುಜೇಂದ್ರ ಶ್ಯಾಡಗುಪ್ಪಿ, ಬಿ.ಜಿ. ನೆಲೋಗಲ್, ಜಿ.ಎಫ್. ದೊಡ್ಡಮನಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು. ಮಂಜುನಾಥ ಪಾಟೀಲ ಸ್ವಾಗತಿಸಿದರು, ಭೀಮರಾವ ಸಾಳುಂಕಿ ನಿರೂಪಿಸಿದರು. ಎಸ್.ಡಿ.ದೊಡ್ಡಮನಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT