ರಾಜ್ಯದಲ್ಲೂ ಯುಪಿ ಮಾದರಿ ಅನುಸರಿಸುತ್ತೀರಾ ಎಂಬ ಪ್ರಶ್ನೆಗೆ, ‘ಗಲಭೆಕೋರರು ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ, ಅವರಿಂದಲೇ ನಷ್ಟದ ಪರಿಹಾರವನ್ನು ವಸೂಲಿ ಮಾಡುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಮಾರ್ಗಸೂಚನೆ ಕೊಟ್ಟಿದೆ. ಅದರಂತೆ, ನಷ್ಟ ಪರಿಹಾರ ವಸೂಲಿ ಮತ್ತು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.