ಈ ಪ್ರಕರಣದ ವಿಚಾರಣೆಯನ್ನು ಕೂಲಕುಂಷವಾಗಿ ನಡೆಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷೆ ಸುನಂದಾ ಹಾಗೂ ಸದಸ್ಯರಾದ ಮಹೇಶ್ವರಿ ಬಿ.ಎಸ್. ಅವರು ಸುವರ್ಣ ಪತ್ತಿನ ಸೌಹಾರ್ದ ಸಹಕಾರಿ ಸಂಸ್ಥೆಯ ಸವಣೂರ ಹಾಗೂ ಹಾವೇರಿ ಶಾಖಾ ವ್ಯವಸ್ಥಾಪಕರು ಅಥವಾ ಸಂಸ್ಥೆಯ ಅಧ್ಯಕ್ಷರು ಒಂಟಿಯಾಗಿ ಮತ್ತು ಜಂಟಿಯಾಗಿ ₹16,41,563 ನಿಶ್ಚಿತ ಠೇವಣಿಗಳ ಮೊತ್ತವನ್ನು ಶೇ 6ರ ಬಡ್ಡಿಯನ್ನು ಸೇರಿಸಿ ನೀಡಲು ಹಾಗೂ ಮಾನಸಿಕ ವ್ಯಥೆಗೆ ಮತ್ತು ಪ್ರಕರಣದ ಪರಿಹಾರವಾಗಿ ₹10 ಸಾವಿರ ಪಾವತಿಸಲು ಆದೇಶ ಹೊರಡಿಸಿದ್ದಾರೆ.