ರಾಣೆಬೆನ್ನೂರು: ‘ತಾಲ್ಲೂಕಿನ ನೂಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡುತ್ತಿಲ್ಲ. ಮಕ್ಕಳಿಗೆ ಓದಲು, ಬರೆಯಲು ಬರುವುದಿಲ್ಲ. ಶಿಕ್ಷಕರು ಪರಸ್ಪರ ಜಗಳವಾಡುತ್ತಾರೆ’ ಎಂಬ ಆರೋಪ ಕೇಳಿ ಬಂದಿದ್ದರಿಂದ ಡಿಡಿಪಿಐ ಅಂದಾನೆಪ್ಪ ವಡಗೇರ ಮತ್ತು ಬಿಇಒ ಎನ್.ಶ್ರೀಧರ ಶನಿವಾರ ಶಾಲೆಗೆ ಭೇಟಿ ನೀಡಿ, ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.