ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂಲಿ ಚಂದಯ್ಯ ಶ್ರೇಷ್ಠ ಕಾಯಕ ಜೀವಿ: ಸಂಜೀವ ಕುಮಾರ

Last Updated 12 ಆಗಸ್ಟ್ 2022, 15:19 IST
ಅಕ್ಷರ ಗಾತ್ರ

ಹಾವೇರಿ: ‘ನುಡಿದಂತೆ ನಡೆದ ನೂಲಿ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ. ಇವರ ಜೀವನಾದರ್ಶಗಳನ್ನು ನಮ್ಮ ಬದುಕಲ್ಲಿ ಪಾಲಿಸಬೇಕು’ ಎಂದು ನಗರಸಭೆ ಅಧ್ಯಕ್ಷ ಸಂಜೀವ ಕುಮಾರ ನೀರಲಗಿ ಹೇಳಿದರು.

ಹಾವೇರಿ ನಗರದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ನೌಕರರ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕೊರಮರ ಸಂಘದ ಸಹಯೋಗದಲ್ಲಿ ಕಾಯಕಯೋಗಿ ಶಿವಶರಣ ನೂಲಿ ಚಂದಯ್ಯನವರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನೂಲಿ ಚಂದಯ್ಯ ಅವರ 48 ವಚನಗಳು ಸಿಕ್ಕಿವೆ. ಇವರ ವಚನಗಳಲ್ಲಿ ಸಮ ಸಮಾಜ ನಿರ್ಮಾಣದ ತಾತ್ವಿಕ ಚಿಂತನೆಗಳು ಅಡಗಿವೆ. ಕಾಯಕದಿಂದಲೇ ದೇವರನ್ನು ಕಂಡ ಈ ಮಹಾನ್ ಶರಣರ ಬದುಕು ನಮಗೆ ಆದರ್ಶವಾಗಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.ಸಮಾಜದ ಏಳಿಗೆಗಾಗಿ ಶ್ರಮಿಸಿದ ವಿವಿಧ ಮುಖಂಡರನ್ನು ಸನ್ಮಾನಿಸಲಾಯಿತು.

ಉಪನ್ಯಾಸಕ ಈಶ್ವರಪ್ಪ ಡಿ.ಕೊರಗರ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಕೊರವರ ಸಂಘದ ಕೃಷ್ಣಪ್ಪ ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಭಜಂತ್ರಿ ಶಹನಾಯಿ ವಾದನ, ರೇಖಾ ಕುಲಕರ್ಣಿ ವಚನ ಗಾಯನ ಮಾಡಿದರು. ಆರ್.ವಿ.ಚಿನ್ನಿಕಟ್ಟಿ ಸ್ವಾಗತಿಸಿದರು. ಜಿಲ್ಲಾ ಕೊರವರ ಸಂಘದ ಅಧ್ಯಕ್ಷ ವೆಂಕಟೇಶ ಡಿ.ಬಿಜಾಪುರ, ಬಿ.ಟಿ ಕೊರವರ, ಬಿ.ಜಿ ಕೊರವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT