ಹೆಸ್ಕಾಂ ಗುತ್ತಿಗೆದಾರ ವೀರನಗೌಡ ಪಾಟೀಲ (30) ಮೃತಪಟ್ಟವರು. ಅವರು ಶಿರಹಟ್ಟಿ ತಾಲ್ಲೂಕಿನ ಹೊಳೆಇಟಗಿ ಗ್ರಾವದವರು ಎಂದು ತಿಳಿದು ಬಂದಿದೆ. ಗುತ್ತಲ ಕಡೆಯಿಂದ ಹಾವೇರಿಗೆ ಹೊರಟಿದ್ದ ಬೈಕ್ ಸವಾರನಿಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.