ಪ್ರತಿದಿನ ಬೆಳಿಗ್ಗೆ 5ರಿಂದ ಮಧ್ಯಾಹ್ನ 2ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಿ, ನಂತರ ಸ್ವಯಂಪ್ರೇರಣೆಯಿಂದ ಬಂದ್ ಮಾಡಲು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಭೆ ಸೇರಿ ನಿರ್ಣಯ ಕೈಗೊಂಡಿದ್ದರು. ಆದರೆ, ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದ ಕಿರಾಣಿ ವರ್ತಕರ ಸಂಘದ ಪದಾಧಿಕಾರಿಗಳು ಶಾಸಕ ನೆಹರು ಓಲೇಕಾರ ಮತ್ತು ತಹಶೀಲ್ದಾರ್ ಶಂಕರ್ ಅವರಿಗೆ ಮನವಿ ಸಲ್ಲಿಸಿದರು.